Belagavi NewsBelgaum NewsCrimeKannada News

*ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅತಿ ವೇಗವಾಗಿ ಬಂದು ಬೈಕ್‌ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ದುರ್ಮಣ ಹೊಂದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳ ಕ್ರಾಸ್ ಬಳಿ ಘಟನೆ ನಡೆದಿದ್ದು, ಹುಕ್ಕೇರಿ ತಾಲೂಕಿನ ಕೆಎಂ ನಾಗನೂರು ಗ್ರಾಮದ ವಿನಯ ವಿಜಯ ಹಿರೇಮಠ (19), ಉಳ್ಳಾಗಡ್ಡಿ ಖಾನಾಪುರ ಗ್ರಾಮದ ಶ್ರವಣ ಗುರುಸಿದ್ದಯ್ಯ ಹಿರೇಮಠ (17) ಸ್ಥಳದಲ್ಲೇ ಸಾವು ಸಾವನ್ನಪ್ಪಿದ್ದಾರೆ.‌

Home add -Advt

ಅಪಘಾತ ನಡೆಯುತ್ತಿದ್ದಂತೆ ಸ್ಥಳದಲ್ಲಿ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಬಳಿಕ ಪೋಲಿಸರಿಂದ ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಕ್ರೈಂ ನಂ. 243/2026 ರಡಿ ಪ್ರಕರಣ ದಾಖಲಾಗಿದೆ.

Related Articles

Back to top button