Kannada NewsKarnataka NewsLatest

ಬೈಕ್ ಅಪಘಾತದಲ್ಲಿ ಇಬ್ಬರು ಯುವಕರ ಸಾವು

ಪ್ರಗತಿವಾಹಿನಿ ಸುದ್ದಿ, ಧಾರವಾಡ: ಶ್ರಾವಣ ಮಾಸದ ಪೂಜೆಗಾಗಿ ದೇವಸ್ಥಾನಕ್ಕೆ ಹೋಗುತ್ತಿದ್ದ ಇಬ್ಬರು ಬೈಕ್ ಸವಾರರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ಬೇಲೂರು ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ದುರ್ಘಟನೆ ಸಂಭವಿಸಿದೆ. ಕೋಟೂರು ಗ್ರಾಮದ ನಾಗರಾಜ ಪರಕಳ್ಳಿ ಮತ್ತು ಗಂಗಾಧರ ಹೊಸವಾಳ ಮೃತಪಟ್ಟವರು.

ಇವರಿಬ್ಬರೂ ಬೈಕ್ ನಲ್ಲಿ ನರೇಂದ್ರ ಗ್ರಾಮದ ಬಳಿಯ ಗುಡ್ಡದ ಬಸವಣ್ಣನ ಗುಡಿಗೆ ಪೂಜೆ ಸಲ್ಲಿಸಲು ಬೈಕ್ ನಲ್ಲಿ ತೆರಳುತ್ತಿದ್ದರು. ಬೈಕ್ ನಿಯಂತ್ರಣ ತಪ್ಪಿ ಮೃತಪಟ್ಟಿದ್ದಾರೋ, ಅಥವಾ ಇನ್ನಾವುದೇ ವಾಹನ ಡಿಕ್ಕಿ ಹೊಡೆದು ಈ ಅವಘಡ ಸಂಭವಿಸಿತೋ ಎಂಬುದು ತಿಳಿದುಬಂದಿಲ್ಲ.

ಗರಗ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ತನಿಖೆ ಕೈಗೊಂಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button