ರಾಮ ಮಂದಿರ ನಿರ್ಮಾಣಕ್ಕೆ 1 ಕೋಟಿ ಹಣ ನೀಡಿದ ಉದ್ಧವ್ ಠಾಕ್ರೆ

ಪ್ರಗತಿವಾಹಿನಿ ಸುದ್ದಿ; ಮುಂಬೈ: ನಾವು ಬಿಜೆಪಿಯೊಂದಿಗಿನ ಸ್ನೇಹ ಸಂಬಂಧ ತೊರೆದಿದ್ದೇವೆ ಹೊರತು ಹಿಂದುತ್ವವನ್ನು ಅಲ್ಲ ಎಂದು ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಅಯೋಧ್ಯೆಗೆ ಭೇಟಿ ನೀಡಿದ ಶಿವಸೇನೆ ಅಧ್ಯಕ್ಷ ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ, ಶನಿವಾರ ರಾಮ ಮಂದಿರ ನಿರ್ಮಾಣಕ್ಕೆ ರೂ. 1 ಕೋಟಿ ಹಣವನ್ನು ನೀಡಿದರು.

ಈ ವೇಳೆ ಮಾತನಾಡಿದ ಅವರು,ಕೊರೋನಾ ವೈರಸ್ ಕಾರಣದಿಂದ ಸರಯೂ ನದಿಯ ಆರತಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ. ಆದರೆ ನಾನು ಅಯೋಧ್ಯೆಗೆ ಬೇಟಿ ನೀಡುತ್ತಿರುತ್ತೇನೆ ಎಂದರು.

ಸದ್ಯ ಎನ್​ಸಿಪಿ ಮತ್ತು ಕಾಂಗ್ರೆಸ್​ ಜತೆಗೂಡಿ ಸರ್ಕಾರ ನಡೆಸುತ್ತಿರುವ ಶಿವಸೇನೆ ಪಕ್ಷದ ಸಿದ್ದಾಂತದಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಶಿವಸೇನೆ ಈಗಲೂ ಹಿಂದುತ್ವವನ್ನೇ ಪ್ರತಿಪಾದಿಸುತ್ತದೆ. ಆದರೆ ಬಿಜೆಪಿಯಿಂದ ದೂರವಾಗಿದ್ದೇವೆ ಅಷ್ಟೇ ಎಂದು ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button