*ರೀಲ್ಸ್ ಮಾಡಲು ಹೋಗಿ ಜಲಪಾತದಲ್ಲಿ ಜಾರಿ ಬಿದ್ದ ಯುವಕ ನಾಪತ್ತೆ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ರಾಜ್ಯಾದ್ಯಂತ ಮಳೆಯ ಅಬ್ಬರ ಜೋರಾಗಿದ್ದು, ಜಲಪಾತಗಳು ಧುಮ್ಮಿಕ್ಕಿ ಹರಿಯುತ್ತಿವೆ. ಈ ನಡುವೆ ರೀಲ್ಸ್ ಮಾಡಲು ಹೋಗಿದ್ದ ಯುವಕನೊಬ್ಬ ನೋಡ ನೋಡುತ್ತಿದ್ದಂತೆ ಕಾಲು ಜಾರಿ ಜಲಪಾತದಲ್ಲಿ ಬಿದ್ದಿರುವ ಘಟನೆ ಉಡುಪಿ ಜಿಲ್ಲೆಯ ಅರಶಿನಗುಂಡಿ ಜಲಪಾತದಲ್ಲಿ ನಡೆದಿದೆ. ಭದ್ರಾವತಿ ಮೂಲದ ಶರತ್ ಕುಮಾರ್ (23) ಜಲಪಾತದಲ್ಲಿ ಬಿದ್ದು ಕಣ್ಮರೆಯಾಗಿದ್ದಾನೆ. ವರುಣಾರ್ಭಟಕ್ಕೆ ನದಿ, ಜಲಪಾತಗಳು ಬೋರ್ಗರೆದು ಹರಿಯುತ್ತಿದ್ದು ಸಾರ್ವಜನಿಕರು ಜಲಪಾತದ ಬಳಿ ಹೋಗದಂತೆ ಜಿಲ್ಲಾಡಳಿತ, ಪೊಲೀಸರು ಕಟ್ಟೆಚ್ಚರಕ್ಕೆ ಸೂಚಿಸುತ್ತಿದ್ದಾರೆ. ಆದರೂ ಪ್ರವಾಸಿಗರು ಹುಚ್ಚಾಟವಾಡುತ್ತಾ ಪ್ರಾಣಕ್ಕೆ ಕುತ್ತು ತಂದುಕೊಳ್ಳುತ್ತಿದ್ದಾರೆ. … Continue reading *ರೀಲ್ಸ್ ಮಾಡಲು ಹೋಗಿ ಜಲಪಾತದಲ್ಲಿ ಜಾರಿ ಬಿದ್ದ ಯುವಕ ನಾಪತ್ತೆ*