Latest

ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ್ ಬನವಾಸಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ಅವರು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಸೋಮಶೇಖರ್ ಕೊನೆಯುಸಿರೆಳೆದಿದ್ದಾರೆ.

ಮೂಲತ: ಉತ್ತರ ಕನ್ನಡ ಜಿಲ್ಲೆಯ ಬನವಾಸಿಯವರಾದ ಸೋಮಶೇಖರ್ 2020ರ ನವೆಂಬರ್ ನಲ್ಲಿ ಉಡುಪಿ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆ ಸಹಾಯಕರಾಗಿ ಅಧಿಕಾರ ಸ್ವೀಕರಿಸಿದ್ದರು. ಪಡುಬಿದ್ರೆ ಬೀಚ್ ಗೆ ಬ್ಲೂ ಫ್ಲ್ಯಾಗ್ ಅಂತರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಶ್ರಮಿಸಿದ್ದರು.

ಚಿನ್ನ ಕಳುವು ಪ್ರಕರಣ: ಆರೋಪಿ ಕಿರಣ್ ವಿರುದ್ಧ ಸಿಐಡಿಯಿಂದ ಮತ್ತೊಂದು ದೂರು

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button