Kannada NewsKarnataka NewsLatest

*ಬಟ್ಟೆ ಮಳಿಗೆಯಲ್ಲಿ ಮಿಸ್ ಫೈರಿಂಗ್; ಓರ್ವನ ಸ್ಥಿತಿ ಗಂಭೀರ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಉಡುಪಿ ಜಿಲ್ಲೆಯ ಪ್ರಸಿದ್ಧ ಬಟ್ಟೆ ಮಳಿಗೆಯೊಂದರಲ್ಲಿ ಗನ್ ನಿಂದ ಆಕಸ್ಮಿಕ ಗುಂಡು ಹಾರಿ ವ್ಯಕ್ತಿಯೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯ ಜಯಲಕ್ಷ್ಮೀ ಸಿಲ್ಕ್ ಮಳಿಗೆಯಲ್ಲಿ ಈ ದುರಂತ ಸಂಭವಿಸಿದೆ. ಯಾರೋ ಒಬ್ಬರು ಬಟ್ಟೆ ಅಂಗಡಿಯಲ್ಲಿ ಗನ್ ಬಿಟ್ಟು ಹೋಗಿದ್ದಾರೆ. ಇದನ್ನು ಗಮನಿಸಿದ ಸಿಬ್ಬಂದಿಗಳು ಗನ್ ಎತ್ತಿ ಪರಿಶೀಲಿಸುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿದೆ. ಎದುರಿಗೆ ಇದ್ದ ವ್ಯಕ್ತಿಗೆ ಗುಂಡೇಟು ತಗುಲಿ ಗಂಭೀರವಾಗಿ ಗಾಯಗೊಂಡಿದ್ದಾರೆ.

Home add -Advt

ಗಾಯಾಳುವನ್ನು ಉಡುಪಿ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

Related Articles

Back to top button