ಪ್ರಗತಿವಾಹಿನಿ ಸುದ್ದಿ; ಉಡುಪಿ: ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ವೃದ್ಧ ಮಹಿಳೆಯೊಬ್ಬರು ವಿವಿಧ ದೇವಸ್ಥಾನಗಳಿಗೆ 5 ಲಕ್ಷ ರೂಪಾಯಿ ದೇಣಿಗೆ ನೀಡಿ ಅನ್ನ ಸಂತರ್ಪಣೆಗೆ ಉಪಯೋಗಿಸಿಕೊಳ್ಳುವಂತೆ ಹೇಳಿರುವ ಅಪರೂಪದ ಘಟನೆ ಬೆಳಕಿಗೆ ಬಂದಿದೆ.
ತನ್ನ ಹೊಟ್ಟೆಪಾಡಿಗಾಗಿ ಭಿಕ್ಷೆ ಬೇಡುವ ಅಶ್ವತ್ಥಮ್ಮ ಎಂಬ ವೃದ್ಧೆ, ಅಯ್ಯಪ್ಪಸ್ವಾಮಿ ವೃತಾಧಾರಿಯಾಗಿದ್ದು, ಸಾಲಿಗ್ರಾಮದ ಗುರುನರಸಿಂಹ ಸ್ವಾಮಿ ದೇವಸ್ಥಾನಕ್ಕೆ 1 ಲಕ್ಷ ರೂ ದೇಣಿಗೆ ನೀಡಿದ್ದಾರೆ. ಈ ವೃದ್ಧೆ ಅದೇ ದೇವಸ್ಥಾನದ ಮುಂದೆ ಕಳೆದ 25 ವರ್ಷಗಳಿಂದ ಭಿಕ್ಷೆ ಬೇಡುತ್ತಿದ್ದು, ಈಗ ಅದೇ ದೇವಾಲಯಕ್ಕೆ ದೇಣಿಗೆ ನೀಡಿದ್ದಾರೆ.
ಅಶ್ವತ್ಥಮ್ಮ ದೇವಸ್ಥಾನಗಳ ಆವರಣಗಳಲ್ಲಿ, ಟೋಲ್ಗೇಟ್ ಬಳಿ ಜನರಿಂದ ಹಣ ಸಗ್ರಹಿಸಿ ಕರಾವಳಿಯ ಹಲವು ದೇವಾಲಯಗಳಿಗೆ ಬರೋಬ್ಬರಿ 5 ಲಕ್ಷ ರೂ ವರೆಗೆ ದೇಣಿಗೆ ನೀಡಿದ್ದಾರೆ. ಪತಿ ಹಾಗೂ ಮಗನ ಮರಣದ ನಂತರ ಹೊಟ್ಟೆಪಾಡಿಗಾಗಿ ಅಶ್ವತ್ಥಮ್ಮ ಭಿಕ್ಷೆ ಬೇಡಿ ಹೊಟ್ಟೆ ತುಂಬಿಸಿಕೊಳ್ಳಲು ಆರಂಭಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ