Uncategorized

*ಉಡುಪಿಯಲ್ಲಿ ವರುಣಾರ್ಭಟಕ್ಕೆ ಇಬ್ಬರು ಸಾವು; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ವರುಣಾರ್ಭಟಕ್ಕೆ ಇಬ್ಬರು ಬಲಿಯಾಗಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಉಡುಪಿ ಜಿಲ್ಲೆಯಲ್ಲಿ ಮಳೆಯಿಂದಾಗಿ ಅಪಾರ ಹಾನಿಯಾಗಿದೆ. ನಾಳೆ ಸಂಜೆ ಅಧಿಕಾರಿಗಳ ಜೊತೆ ಸಭೆ ನಡೆಸಲಾಗುವುದು ಎಂದರು.

ಉಡುಪಿಯಲ್ಲಿ ಮಳೆಯಿಂದಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಹಲವೆಡೆ ಅಪಾರ ಹಾನಿಯುಂಟಾಗಿದೆ. ನಾಳೆ ಸಂಜೆ ಅಧಿವೇಶ ಮುಗಿದ ಬಳಿಕ ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತೇನೆ ಎಂದು ಹೇಳಿದರು.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button