*ಉಡುಪಿ; ಪಡುಬಿದ್ರಿಯಲ್ಲಿ ಕಡಲ್ಕೊರೆತದ ಹಾನಿ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ; ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉಡುಪಿ ಜಿಲ್ಲೆಗೆ ಭೇಟಿ ನೀಡಿದ್ದು, ಮಳೆಹಾನಿಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿಯ ಪಡುಬಿದ್ರಿಯಲ್ಲಿ ಕಡಲ್ ಕೊರೆತವನ್ನು ವೀಕ್ಷಿಸಿದರು. ಈ ವೇಳೆ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರಾದ ಮಂಕಾಳ ವೈದ್ಯ ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಕಡಲ ಕೊರೆತದಿಂದ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ಸಾಕಷ್ಟು ಹಾನಿಗೊಳಗಾಗಿದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ. ಈ ಭಾಗದಲ್ಲಿ ಸಿಎಂ ಪರಿಶೀಲನೆ ನಡೆಸಿದರು. *ಉಡುಪಿ … Continue reading *ಉಡುಪಿ; ಪಡುಬಿದ್ರಿಯಲ್ಲಿ ಕಡಲ್ಕೊರೆತದ ಹಾನಿ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ*