Kannada NewsKarnataka NewsLatest

*ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಅಗ್ನಿ ಅವಘಡ; ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉದ್ಯಾನ್ ಎಕ್ಸ್ ಪ್ರೆಸ್ ರೈಲಿನಲ್ಲಿ ಬೆಂಕಿ ಅವಘಡ ಸಂಭವಿಸಿದ ಘಟನೆ ರಾಜಧಾನಿ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ರೈಲು ನಿಲ್ದಾಣದಲ್ಲಿ ನಡೆದಿದೆ.

ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ರೈಲ್ವೆ ಎಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ರೈಲಿನ ಎರಡು ಕೋ಼ಚ್ ಗಳಿಗೆ ಆಅರಿಸಿದೆ. ಪ್ರಯಾಣಿಕರು ಆತಂಕಗೊಂಡಿದ್ದಾರೆ.

Home add -Advt

ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ರೈಲಿನಲ್ಲಿ ಬೆಂಕಿ ಹಿನ್ನೆಲೆಯಲ್ಲಿ ರೈಲು ನಿಲ್ದಾಣದ ತುಂಬೆಲ್ಲ ದಟ್ಟ ಹೊಗೆ ಆವರಿಸಿದೆ. ಸಧ್ಯ ಬೆಂಕಿ ತಗುಲಿದ ಬೋಗಿಗಳನ್ನು ರೈಲಿನಿಂದ ಬೇರ್ಪಡಿಸಲಾಗಿದೆ.


Related Articles

Back to top button