Kannada NewsLatest

ಕೆಲವೇ ಕ್ಷಣಗಳಲ್ಲಿ ಮಣ್ಣಲ್ಲಿ ಮಣ್ಣಾಗಲಿದ್ದಾರೆ ಉಮೇಶ್ ಕತ್ತಿ

ಉಮೇಶ ಕತ್ತಿ ಪತ್ನಿ ಶೀಲಾ ಕತ್ತಿ ಅವರಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಹೃದಯಾಘಾತದಿಂದ ನಿಧನರಾದ ಅರಣ್ಯ ಮತ್ತು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆ ಕೆಲವೇ ಕ್ಷಣಗಳಲ್ಲಿ ನಡೆಯಲಿದ್ದು,  ಬೆಳಗಾವಿ ಜಿಲ್ಲೆಯ ಅವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿಧಿವಿಧಾನಗಳು ನಡೆಯುತ್ತಿವೆ.

ಬೆಂಗಳೂರಿನ ಡಾಲರ್ಸ್ ಕಾಲೋನಿ ನಿವಾಸದಲ್ಲಿ ನಿನ್ನೆ ರಾತ್ರಿ 10:30ರ ಸುಮಾರಿಗೆ ಹೃದಯಾಘಾತದಿಂದ ನಿಧನರಾಗಿದ ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಇಂದು ಮಧ್ಯಾಹ್ನ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಿಂದ ಬೆಳಗಾವಿಗೆ ವಿಶೇಷ ವಿಮಾನದ ಮೂಲಕ ತರಲಾಯಿತು.

ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದ ಸಚಿವರ ಪಾರ್ಥಿವ ಶರೀರವನ್ನು ಹೂವಿನಿಂದ ಅಲಂಕೃತಗೊಂಡ ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ಅವರ ಸ್ವಗ್ರಾಮ ಬೆಲ್ಲದ ಬಾಗೇವಾಡಿಗೆ ತರಲಾಯಿತು.

ಉಮೇಶ್ ಕತ್ತಿ ಅವರ ಅಂತಿಮ ಯಾತ್ರೆಯಲ್ಲಿ ಸಾಗರೋಪಾದಿಯಲ್ಲಿ ಜನರು ಭಾಗಿಯಾಗಿದ್ದರು. ಮೆರವಣಿಗೆ ಯುದ್ಧಕ್ಕೂ ಕತ್ತಿ ಬೆಂಬಲಿಗರು ಉಮೇಶ್ ಅಣ್ಣ ಅಮರ್ ರಹೇ ಎಂಬ ಘೋಷಣೆಯೊಂದಿಗೆ ಸಾಗಿದರು.

ಸಂಜೆ ವೇಳೆಗೆ ಸ್ವಗ್ರಾಮ ಬೆಲ್ಲದ ಬಾಗೇವಾಡಿಗೆ ಬಂದ ಉಮೇಶ್ ಕತ್ತಿ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ಅಂತಿಮ ದರ್ಶನಕ್ಕಾಗಿ ಕೆಲ ಕಾಲ ವಿಶ್ವರಾಜ ಶುಗರ್ ಫ್ಯಾಕ್ಟರಿ ಆವರಣದಲ್ಲಿ ಇಡಲಾಗಿತ್ತು.

ಈ ವೇಳೆ ವಿವಿಧ ಮಠಾಧೀಶರು, ಸಿಎಂ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ, ಸಚಿವರಾದ ಆರ್.ಅಶೋಕ್, ಸಿ.ಸಿ.ಪಾಟೀಲ್, ಶಿವರಾಮ್ ಹೆಬ್ಬಾರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಿ.ಟಿ ರವಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದೆ ಮಂಗಳಾ ಅಂಗಡಿ, ವಿಪಕ್ಷ ನಾಯಕ ಸಿದ್ದರಾಮಯ್ಯ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಎ.ಬಿ.ಪಾಟೀಲ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ಚನ್ನರಾಜ ಹಟ್ಟಿಹೊಳಿ, ಫಿರೋಜ್ ಸೇಠ್, ಅಭಯ ಪಾಟೀಲ, ಅನಿಲ ಬೆನಕೆ, ಲಕ್ಷ್ಮಣ ಸವದಿ,  ಬಾಲಚಂದ್ರ ಜಾರಕಿಹೊಳಿ, ರಮೇಶ ಜಾರಕಿಹೊಳಿ, ಬೆಳಗಾವಿ ಭಾಗದ ಶಾಸಕರು, ಅಪಾರ ಬೆಂಬಲಿಗರು ಸಚಿವ ಉಮೇಶ್ ಕತ್ತಿ ಅವರ ಪಾರ್ಥಿವ ಶರಿರಕ್ಕೆ ಅಂತಿಮ ನಮನ ಸಲ್ಲಿಸಿದರು.

ಅಂತಿಮ ವಿಧಿ ವಿಧಾನದ ವೇಳೆ ಹಾಜರಿದ್ದ ಕಾಂಗ್ರೆಸ್ ಮುಖಂಡರಾದ ಎ.ಬಿ.ಪಾಟೀಲ, ಸತೀಶ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ

ಬಳಿಕ ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಕುಟುಂಬದವರಿಂದ ಲಿಂಗಾಯಿತ ಸಂಪ್ರದಾಯದಂತೆ ಪೂಜೆ, ಅಂತಿಮ ವಿಧಿ ವಿಧಾನಗಳು ನೆರವೇರಿದವು.

ಬಳಿಕ ಬೆಲ್ಲದ ಬಾಗೇವಾಡಿಯ ಸಚಿವರ ತೋಟದಲ್ಲಿ ಉಮೇಶ್ ಕತ್ತಿ ಅವರ ತಂದೆ ವಿಶ್ವನಾಥ ಕತ್ತಿ ಅವರ ಸಮಾಧಿ ಬಳಿಯೇ ಮಗ ಉಮೇಶ್ ಕತ್ತಿ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತಿದೆ.

ಇನ್ನು ಕೆಲವೇ ಕ್ಷಣಗಳಲ್ಲಿ ಉಮೇಶ ಕತ್ತಿ ಮಣ್ಣಲ್ಲಿ ಮಣ್ಣಾಗಲಿದ್ದಾರೆ.

 

ಉಮೇಶ್ ಕತ್ತಿ ಪತ್ನಿಗೆ ಪ್ರಧಾನಿ ಮೋದಿ ಸಂತಾಪ ಸೂಚಕ ವೈಯಕ್ತಿಕ ಪತ್ರ

https://pragati.taskdun.com/politics/umesh-kattideathsheela-umesh-kattipm-narendra-modilatter/

https://pragati.taskdun.com/latest/umesh-kattideath3-days-mourning/

https://pragati.taskdun.com/belagavi-news/to-belgaum-by-special-flight-umesh-katthis-mortal-remains-will-be-taken-in-a-procession-from-sambra-airport/

https://pragati.taskdun.com/karnataka-news/death-of-umesh-katti-holiday-for-government-offices-schools-and-colleges-across-belgaum-district-on-wednesday/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button