*ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಐವರು ಸಾವು*

ಪ್ರಗತಿವಾಹಿನಿ ಸುದ್ದಿ: ತೀವ್ರ ಮಳೆಯಿಂದಾಗಿ ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡ ಕುಸಿತ ಪ್ರಕರಣದಲ್ಲಿ ಸಾವಿನ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.  ಮಂಗಳವಾರ ನಡೆದ ಈ ದುರಂತದಲ್ಲಿ ಹತ್ತಾರು ಕಾರ್ಮಿಕರು ಮಣ್ಣಿನ ಅವಶೇಷಗಳಡಿ ಹೂತು ಹೋಗಿದ್ದರು. ತಡರಾತ್ರಿ ಸಮರೋಪಾದಿಯಲ್ಲಿ ಕಾರ್ಯಾಚರಣೆ ನಡೆಯುತ್ತಿದ್ದು, 15 ತಾಸುಗಳಿಗೂ ಹೆಚ್ಚು ಕಾಲ ಉಸಿರುಗಟ್ಟಿ ಅವಶೇಷಗಳಡಿ ಸಿಲುಕಿದ್ದ ಕಾರ್ಮಿಕನೊಬ್ಬನನ್ನು ಜೀವಂತವಾಗಿ ರಕ್ಷಿಸಲಾಗಿದೆ. ಸ್ಥಳದಲ್ಲಿ ಆಂಬುಲೆನ್ಸ್ ಅಗ್ನಿ ಶಾಮಕ ದಳ ಹಾಗೂ ಪೊಲೀಸ್ ಪಡೆಗಳು ಬೀಡುಬಿಟ್ಟಿದ್ದು ಎಡೆಬಿಡದೆ ಜನರನ್ನು ಹೊರತೆಗೆಯಲು ಪ್ರಯತ್ನಿಸಲಾಗುತ್ತಿದೆ. *ಭಾರಿ ಮಳೆ: … Continue reading *ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣ: ಐವರು ಸಾವು*