Latest

ಭೂಗತಪಾತಕಿ ಛೋಟಾ ರಾಜನ್ ಕೊರೊನಾಗೆ ಬಲಿ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಭೂಗತಪಾತಕಿ ಛೋಟಾ ರಾಜನ್ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ ಎಂದು ದೆಹಲಿ ಏಮ್ಸ್ ಆಸ್ಪತ್ರೆ ಮಾಹಿತಿ ನೀಡಿದೆ.

ತಿಹಾರ್ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದ ಛೋಟಾ ರಾಜನ್ ಗೆ ಕೊರೊನಾ ಸೋಂಕು ತಗುಲಿತ್ತು. ಕಳೆದ ವಾರ ಆತನನ್ನು ಏಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತಪಟ್ಟಿದ್ದಾಗಿ ಏಮ್ಸ್ ಆಸ್ಪತ್ರೆ ತಿಳಿಸಿದೆ.

ಛೋಟಾ ರಾಜನ್ ನನ್ನು ಇಂಡೋನೇಷ್ಯಾದಿಂದ ಗಡಿಪಾರುಮಾಡಿ 2015ರಲ್ಲಿ ಭಾರತಕ್ಕೆ ಕರೆತರಲಾಗಿತ್ತು. ಅಂದಿನಿಂದ ಆತನನ್ನು ತಿಹಾರ್ ಜೈಲಿನಲ್ಲಿ ಇರಿಸಲಾಗಿತ್ತು. ಇದೀಗ ಕೊರೊನಾ ಸೋಂಕಿಗೆ ಬಲಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಹಿರಿಯ ನಟ ಶಂಖನಾದ ಅರವಿಂದ್ ಕೊರೊನಾಗೆ ಬಲಿ

Home add -Advt

Related Articles

Back to top button