Latest
*ಬಡವರಿಗೆ, ಹಣದುಬ್ಬರ ನಿಯಂತ್ರಣಕ್ಕೆ ಯಾವುದೇ ಕ್ರಮಗಳೂ ಇಲ್ಲ; ಕೇಂದ್ರ ಬಜೆಟ್ ಬಗ್ಗೆ ಖರ್ಗೆ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕೇಂದ್ರ ಬಜೆಟ್ ಕೇವಲ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಿರುವ ಬಜೆಟ್ ಆಗಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗರರೊಂದಿಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಮುಂಬರುವ 3-4 ರಾಜ್ಯಗಳ ವಿಧಾನಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಪ್ರಧಾನಿ ಮೋದಿ ಸರ್ಕಾರ ಬಜೆಟ್ ಮಂಡಿಸಿದೆ ಅಷ್ಟೇ ಎಂದರು.
ಬಡವರಿಗೆ ಮತ್ತು ಹಣದುಬ್ಬರವನ್ನು ನಿಯಂತ್ರಿಸಲು ಬಜೆಟ್ನಲ್ಲಿ ಯಾವುದೇ ಕ್ರಮಗಳಿಲ್ಲ. ಸರ್ಕಾರಿ ಖಾಲಿ ಹುದ್ದೆಗಳು ಮತ್ತು ಮನ್ರೇಗಾ(MNREGA) ಭರ್ತಿಗೆ ಯಾವುದೇ ಭರವಸೆಗಳೂ ಬಜೆಟ್ ನಲ್ಲಿಲ್ಲ. ನೀರಸವಾದ ಬಜೆಟ್ ಇದಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
*ಕೇಂದ್ರ ಸರ್ಕಾರದ ಬಜೆಟ್ ಕನ್ನಡಿಯೊಳಗಿನ ಗಂಟು*
https://pragati.taskdun.com/union-budget-2023siddaramaihreaction/




