Kannada NewsLatestNational
*ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಮಹತ್ವದ ಘೋಷಣೆ*

ಪ್ರಗತಿವಾಹಿನಿ ಸುದ್ದಿ: ಎಲ್ಲಾ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಆಯುಷ್ಮಾನ್ ಭಾರತ್ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ಕೇಂದ್ರದ ಮಧ್ಯಂತರ ಬಜೆಟ್ ಮಂಡಿಸಿದ ಸಚಿವೆ ನಿರ್ಮಲಾ ಸೀತಾರಾಮನ್, ಆಯುಷ್ಮಾನ್ ಭಾರತ್ ಯೋಜನೆಯಡಿ ಆಶಾ ಕಾರ್ಯಕರ್ತೆಯರಿಗೆ ಸುಧಾರಿತ ಆರೋಗ್ಯ ಸೇವೆ ಒದಗಿಸಲಾಗುವುದು. ಭಾರತದಾದ್ಯಂತ ಮಿಷನ್ ಇಂದ್ರಧನುಷ್ ವ್ಯಾಪಕ ಪ್ರಚಾರಕ್ಕಾಗಿ ಯು-ವಿನ್ ಪ್ಲಾಟ್ ಫಾರ್ಟ್ ನ್ನು ಆರಂಭಿಸಲಾಗುವುದು ಎಂದರು.
ಬಾಡಿಗೆ ಮನೆಗಳು, ಕೊಳಗೇರಿ ಮನೆಗಳಲ್ಲಿ ವಾಸವಿರುವ ಜನರಿಗೆ ಹೊಸ ಮನೆಯನ್ನು ಖರೀದಿಸಲು ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ನೆರವು ನೀಡಲಾಗುವುದು ಎಂದರು.




