ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬಹುನಿರೀಕ್ಷಿತ ಕೇಂದ್ರ ಸಚಿವ ಸಂಪುಟ ಪುನಾರಚನೆಗೆ ಸಿದ್ಧತೆ ನಡೆದಿದ್ದು, ರಾಜ್ಯದ ಯಾವೆಲ್ಲ ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗಲಿದೆ ಎಂಬ ಕುತೂಹಲ ಮೂಡಿದೆ.
ಈ ಬಗ್ಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಗಣಿ ಸಚಿವ ಮುರುಗೇಶ್ ನಿರಾಣಿ, ರಾಜ್ಯದ 2-3 ಸಂಸದರಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ಸಿಗುವುದು ಖಚಿತವಾಗಿದೆ ಎಂದು ಹೇಳಿದ್ದಾರೆ.
ಜಾತಿ ಲೆಕ್ಕಾಚಾರದ ಪ್ರಕಾರ ಲಿಂಗಾಯಿತರಿಗೆ ಒಂದು ಸ್ಥಾನ, ಪರಿಶಿಷ್ಟ ಜಾತಿಗೆ ಒಂದು ಸಚಿವ ಸ್ಥಾನ ಹಾಗೂ ಮತ್ತೊಂದು ಸ್ಥಾನ ಯಾರಿಗೆ ಕೊಡುತ್ತಾರೆ ನೋಡಬೇಕು ಎಂದರು.
ಬಿಜೆಪಿ ಅಂಗಳದಲ್ಲಿ ಹೀಗೊಂದು ಸುದ್ದಿ…. 3 ತಲೆ ಉರುಳಿಸಲು ನಿರ್ಧಾರ?
ಬಾಲಿವುಡ್ ಹಿರಿಯ ನಟ ದಿಲೀಪ್ ಕುಮಾರ್ ಇನ್ನಿಲ್ಲ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ