
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಇಂದು ಪುನಾರಚನೆಯಾಗಲಿರುವ ಪ್ರಧಾನಿ ಮೋದಿ ಸಂಪುಟದಲ್ಲಿ ರಾಜ್ಯದ ಶೋಭಾ ಕರಂದ್ಲಾಜೆ ಸೇರಿದಂತೆ ನಾಲ್ವರು ಸಂಸದರಿಗೆ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ.
ಈಗಾಗಲೇ ಶೋಭಾ ಕರಂದ್ಲಾಜೆ ಹಾಗೂ ಸಂಸದ ಎ.ನಾರಾಯಣಸ್ವಾಮಿಗೆ ಕೇಂದ್ರ ಸಂಪುಟದಲ್ಲಿ ಸ್ಥಾನ ನೀಡುವುದು ಖಚಿತವಾಗಿದ್ದು, ಈ ನಡುವೆ ಬೀದರ್ ಲೋಕಸಭಾ ಕ್ಷೇತ್ರದ ಸಂಸದ ಭಗವಂತ ಖೂಬಾ ಅವರಿಗೂ ಪ್ರಧಾನಿ ಕಾರ್ಯಾಲಯದಿಂದ ಬುಲಾವ್ ಬಂದಿದೆ. ಈ ಹಿನ್ನೆಲೆಯಲ್ಲಿ ಭಗವಂತ ಖೂಬಾ ಅವರಿಗೂ ಸಂಪಟದಲ್ಲಿ ಅವಕಾಶ ನೀಡಲಾಗುತ್ತಿದೆ.
ಇನ್ನು ರಾಜ್ಯದ ಮತ್ತೋರ್ವ ಸಂಸದ ರಾಜೀವ್ ಚಂದ್ರಶೇಖರ್ ಹೆಸರು ಕೇಳಿಬರುತ್ತಿದ್ದು, ಪ್ರಧಾನಿ ಮೋದಿ ಸಂಪುಟ ಸೇರ್ಪಡೆಯಾಗುವ ಸಾಧ್ಯತೆ ಇದೆ.
ಕೇಂದ್ರ ಸಂಪುಟಕ್ಕೆ ಡಿ.ವಿ.ಸದಾನಂದಗೌಡ ರಾಜೀನಾಮೆ