Kannada NewsKarnataka NewsLatest

ಕೆಲವೇ ಕ್ಷಣಗಳಲ್ಲಿ ಬೆಳಗಾವಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ  – ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿನಿಂದ ಹೊರಟಿದ್ದು, ಕೆಲವೇ ಕ್ಷಣಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ಬಾಗಲಕೋಟೆ ಹಾಗೂ ಬೆಳಗಾವಿಯಲ್ಲಿ ಅಮಿತ್ ಶಾ ಇಂದು ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬೆಳಗಾವಿಯಿಂದ ಹೆಲಿಕಾಪ್ಟರ್ ಮೂಲಕ ಬಾಗಲಕೋಟೆಗೆ ತೆರಳುವ ಅಮಿತ್ ಶಾ ಬಾಗಲಕೋಟೆ ಜಿಲ್ಲೆಯ ಕೆರಲಮಟ್ಟಿ ಗ್ರಾಮದಲ್ಲಿ ನಿರಾಣಿ ಸಮೂಹದ ಸಕ್ಕರೆ ಕಾರ್ಖಾನೆ ಹಾಗೂ ಎಥೆನಾಲ್ ಘಟಕಕ್ಕೆ ನಿರಾಣಿ ಪೂಜೆ ಸಲ್ಲಿಸಲಿದ್ದಾರೆ.

ಸಂಜೆ 4 ಗಂಟೆಗೆ ಬೆಳಗಾವಿ ಜಿಲ್ಲಾ ಕ್ರೀಡಾಂಗಣದಲ್ಲಿ ಜನಸೇವಕ ಸಮಾವೇಶದಲ್ಲಿ ಅವರು ಭಾಗವಹಿಸುವರು. ಇದಕ್ಕೂ ಮುನ್ನ 3.40ಕ್ಕೆ ದಿ.ಸುರೇಶ ಅಂಗಡಿ ಅವರ ನಿವಾಸಕ್ಕೂ ಭೇಟಿ ನೀಡುವರು.

ಸಂಜೆ 5.40ಕ್ಕೆ ಕೆಎಲ್ಇ ಸಂಸ್ಥೆಯ ವಿಶ್ವವಿದ್ಯಾಲಯದಲ್ಲಿ ಅತ್ಯಾಧುನಿಕ ಲ್ಯಾಬ್ ಉದ್ಘಾಟಿಸುವರು. ನಂತರ ಕೆಎಲ್ಇ ಶತಮಾನೋತ್ಸವ ಸಭಾಭವನದಲ್ಲಿ ಬಿಜೆಪಿ ಪ್ರಮುಖರ ಸಭೆಯಲ್ಲಿ ಭಾಗವಹಿಸಿ ರಾತ್ರಿ ನವದೆಹಲಿಗೆ ಪ್ರಯಾಣ ಬೆಳೆಸುವರು.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಹಲವಾರು ರಾಜ್ಯದ ಸಚಿವರು, ಬಿಜೆಪಿ ರಾಜ್ಯ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

ಅಮಿತ್ ಶಾ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಬೆಳಗಾವಿ ಸಂಪೂರ್ಣ ಕೇಸರಿಮಯವಾಗಿದೆ. ಬೆಳಗಾವಿ ಲೋಕಸಭಾ ಉಪಚುನಾವಣೆ ಮತ್ತು ತಾಲೂಕು ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳ ಪ್ರಚಾರ ಸಭೆಯ ರೀತಿಯಲ್ಲಿ ಅಮಿತ್ ಶಾ ಅವರ ಇಂದಿನ ಸಮಾವೇಶ ಆಯೋಜನೆಗೊಂಡಿದೆ.

ಇದೇ ವೇಳೆ ಬಿಜೆಪಿಯ ಅಸಮಾಧಾನಿತ ಶಾಸಕರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಅಹವಾಲು ಸಲ್ಲಿಸಲಿದ್ದಾರೆ.

ಸಂಬಂಧಿಸಿದ ಸುದ್ದಿಗಳು –

ಅಮಿತ್ ಶಾ ರಾಜ್ಯ ಪ್ರವಾಸ ಪಟ್ಟಿ : ಬೆಳಗಾವಿಯಲ್ಲಿ 4 ಕಾರ್ಯಕ್ರಮ

ಅಮಿತ್ ಶಾ ಬೆಳಗಾವಿ ಕಾರ್ಯಕ್ರಮದಲ್ಲಿ ಕೆಲವು ಬದಲಾವಣೆ

ಕೆಎಲ್‌ಇ ಅತ್ಯಾಧುನಿಕ ಸಿಮ್ಯುಲೇಶನ್ ಸೆಂಟರ್ ಹಾಗೂ ಕ್ಲಿನಿಕಲ್ ಸ್ಕಿಲ್ಸ್ ಲ್ಯಾಬ್ ಉದ್ಘಾಟಿಸಲಿದ್ದಾರೆ ಅಮಿತ್ ಶಾ

ಅಮಿತ್ ಶಾ ಸಭೆ ಸ್ಥಳ ಬದಲಾವಣೆ: ಯಾರಿಗೆಲ್ಲ ಅವಕಾಶ?

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button