Kannada NewsKarnataka NewsPolitics

*ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್*

ಪ್ರಗತಿವಾಹಿನಿ ಸುದ್ದಿ: ಉಡುಪಿಯ ಇತಿಹಾಸ ಪ್ರಸಿದ್ಧ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಬೆಳಗ್ಗೆ ಭೇಟಿ ನೀಡಿ,  ಕಡೆಗೋಲು ಕೃಷ್ಣನ ದರ್ಶನ ಪಡೆದರು.

ಮಠಕ್ಕೆ ಆಗಮಿಸಿದ ಸಚಿವರಿಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು. ಶ್ರೀ ಕೃಷ್ಣನ ದರ್ಶನದ ಬಳಿಕ ಸಚಿವರು ಉಡುಪಿಯ ಪ್ರಾಚೀನ ಇತಿಹಾಸ ಪ್ರಸಿದ್ಧ ದೇಗುಲಗಳಾದ ಶ್ರೀ ಅನಂತೇಶ್ವರ ಮತ್ತು ಶ್ರೀ ಚಂದ್ರಮೌಳೀಶ್ವರ ದೇವಸ್ಥಾನಗಳಿಗೂ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

Home add -Advt

ನಂತರ ಪ್ರಸಕ್ತ ಸಾಲಿನ ಪರ್ಯಾಯ ಪೀಠ ಅಲಂಕರಿಸಿರುವ ಶಿರೂರು ಮಠಕ್ಕೆ ಸಚಿವರು ಭೇಟಿ ನೀಡಿದರು. ಪರ್ಯಾಯ ಶಿರೂರು ಮಠಾಧೀಶರಾದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಕೇಂದ್ರ ಸಚಿವರಿಗೆ ಮಠದ ವತಿಯಿಂದ ಆತ್ಮೀಯವಾಗಿ ಗೌರವಾರ್ಪಣೆ ಮಾಡಿದರು.

Related Articles

Back to top button