Kannada NewsKarnataka News

ಬೆಳಗಾವಿ ನಗರಮಧ್ಯೆ ಧರೆಗುರುಳಿದ ಮರ: ಯುವಕನ ಸಾವು

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿ ನಗರಮಧ್ಯೆ ಬೆಳ್ಳಂಬೆಳಗ್ಗೆ ಮರವೊಂದು ಧರೆಗುರುಳಿದೆ.

ಬೆಳಗಾವಿ
ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಇರುವ ಬೃಹದಾಕಾರದ ಮರ ಬಿದ್ದು ವಾಹನ ಸವಾರ ರಾಕೇಶ ಸುನದಾಳ ಸ್ಥಳದಲ್ಲಿಯೇ ಮೃತಪಟ್ಟಿದ್ದರೇ ಮತ್ತೊರ್ವ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳವಾರ ನಡೆದಿದೆ.
ಬೆಳಗಾವಿ ನಗರದಲ್ಲಿ ಮಳೆ ಅವಾಂತರಕ್ಕೆ ವ್ಯಕ್ತಿ ಬಲಿಯಾಗಿದ್ದಾನೆ.ನಿರಂತರ ಮಳೆಗೆ ಮರ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸಂಗೊಳ್ಳಿ ರಾಯಣ್ಣ ವೃತ್ತದಿಂದ ಚನ್ನಮ್ಮ ವೃತ್ತದತ್ತ ತೆರಳುತ್ತಿದ್ದ ಬೈಕ್ ಸವಾರ. ಈ ವೇಳೆ ರಸ್ತೆಯ ಮೇಲೆ ಏಕಾಏಕಿ ಬಿದ್ದ ಬೃಹದಾಕಾರದ ಮರ ಕ್ಷಣಾರ್ಧದಲ್ಲಿ ವಾಹನ ಸವಾರ ಮೃತಪಟ್ಟಿದ್ದಾನೆ.
ಮರದ ಅವಶೇಷಗಳಡಿ ಸಿಲುಕಿದ್ದ ಇಬ್ಬರು ಬೈಕ್ ಸವಾರರನ್ನು ಹೊರಗೆ ತೆಗೆಯಲು ಪೊಲೀಸರು ಹರಸಾಹಸ ಪಡುತ್ತಿದ್ದರು.
ಸ್ಥಳಕ್ಕೆ ಡಿಸಿಪಿ ರವೀಂದ್ರ ಗಡಾದಿ, ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಬೆಳಗಾವಿ ಉತ್ತರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟ‌ನೆ ನಡೆದಿದೆ.

 

 

ಶಿಕ್ಷಕನಿಂದ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ಪ್ರಾಚಾರ್ಯ ಸೇರಿ ಇಬ್ಬರ ಬಂಧನ

 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button