Kannada NewsKarnataka NewsLatestPolitics

*ಕೆಡಿಸಿಸಿ ಬ್ಯಾಂಕ್ ಚುನಾವಣೆ: ಶಿವರಾಮ್ ಹೆಬ್ಬಾರ್ ಬಣಕ್ಕೆ ಸ್ಪಷ್ಟ ಬಹುಮತ*

ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಕೆಡಿಸಿಸಿ) ಆಡಳಿತ ಮಂಡಳಿಯ ಚುನಾವಣೆಯಲ್ಲಿ ಶಾಸಕ ಶಿವರಾಮ್ ಹೆಬ್ಬಾರ್ ಬಣ ಸ್ಪಷ್ಟ ಬಹುತದೊಂದಿಗೆ ಬ್ಯಾಂಕ್ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ.

ಕೋರ್ಟ್ ತಡೆಯಾಜ್ಞೆಯಿಂದ ಬಾಕಿ ಉಳಿದಿದ್ದ ಗ್ರಾಹಕರ ಮತ್ತು ಸಂಸ್ಕರಣಾ ಸಹಕಾರಿ ಸಂಘಗಳ ಕ್ಷೇತ್ರದ ಮತ ಎಣಿಕೆ ಇಂದು ಶಿರಸಿಯ ಮುಖ್ಯ ಕಚೇರಿಯಲ್ಲಿ ನಡೆಯಿತು.

ಶಿವರಾಮ್ ಹೆಬ್ಬಾರ್ ಬಣದ ನಿರಂಜನ್ ಭಟ್ 20 ಮತಗಳನ್ನು ಪಡೆದು ಜಯಗಳಿಸಿದ್ದಾರೆ. ಪ್ರತಿಸ್ಪರ್ಧಿ ತಿಮ್ಮಯ್ಯ ಹೆಗಡೆ 14 ಮತಗಳನ್ನು ಪಡೆದು ಪರಾಭವಗೊಂಡಿದ್ದಾರೆ. ಇದರೊಂದಿಗೆ ಒಟ್ಟು 16 ಚುನಾಯಿತ ನಿರ್ದೇಶಕ ಸ್ಥಾನಗಳ ಫಲಿತಾಂಶ ಪ್ರಕಟವಾಗಿದೆ. ಶಿವರಾಮ್ ಹೆಬ್ಬಾರ್ ಬಣ 11 ಸ್ಥಾನಗಳಲ್ಲಿ ಹಾಗೂ ಸಚಿವ ಮಂಕಾಳು ವೈದ್ಯ ಬಣ 5 ಸ್ಥಾನಗಳಲ್ಲಿ ಗೆಲುವು ಸಾಧಿಸಿದೆ.

Home add -Advt

Related Articles

Back to top button