*ಧಾರ್ಮಿಕ ಕಾರ್ಯಕ್ರಮದ ವೇಳೆ ದುರಂತ: ವಾಚ್ ಟವರ್ ಕುಸಿದು ಬಿದ್ದು ಐವರು ಭಕ್ತರು ಸಾವು*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದಲ್ಲಿ ಜೈನ ಸಮುದಾಯದ ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದು ಬಿದ್ದು ಐವರು ಭಕ್ತರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬರೌತ್ ನಲ್ಲಿ ಜೈನ ಸಮುದಾಯದ ನಿರ್ವಾಣ ಮಹೋತ್ಸವ ಕಾರ್ಯಕ್ರಮದ ವೇಳೆ ಈ ದುರಂತ ಸಂಭವಿಸಿದೆ. ಐವರು ಭಕ್ತರು ಸ್ಥಳದಲ್ಲೇ ಸಾವನ್ನಪ್ಪಿದ್ದು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಜೈನ ಸನ್ಯಾಸಿಗಳ ಸಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ.Home add -Advt *ಏರೋ ಇಂಡಿಯಾ … Continue reading *ಧಾರ್ಮಿಕ ಕಾರ್ಯಕ್ರಮದ ವೇಳೆ ದುರಂತ: ವಾಚ್ ಟವರ್ ಕುಸಿದು ಬಿದ್ದು ಐವರು ಭಕ್ತರು ಸಾವು*