Belagavi NewsBelgaum News

*ಗ್ರಾಮ ಪಂಚಾಯಿತಿಗಳು ಬಲಗೊಂಡಾಗ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಬೈಲಹೊಂಗಲ ತಾಲೂಕಿನ ವಕ್ಕುಂದ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಮೊದಲನೆ ಮಹಡಿ ಕಟ್ಟಡವನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಉದ್ಘಾಟಿಸಿದರು.

Home add -Advt


ಗ್ರಾಮ ಪಂಚಾಯಿತಿಗಳು ಬಲಗೊಂಡಾಗ ಅಧಿಕಾರ ವಿಕೇಂದ್ರೀಕರಣಕ್ಕೆ ಅರ್ಥ ಬರುತ್ತದೆ. ಹಳ್ಳಿಗಳಿಗೆ ಹೆಚ್ಚಿನ ಅಧಿಕಾರ ಸಿಗಬೇಕು. ಹಾಗಾಗಿ ಗ್ರಾಮ ಸಭೆಗಳು ಹೆಚ್ಚಾಗಿ ನಡೆಯಬೇಕು. ಸ್ಥಳೀಯ ಆಡಳಿತಗಳು ಜನರಿಗೆ ನಿಸ್ವಾರ್ಥದಿಂದ ಸೇವೆ ಸಲ್ಲಿಸಬೇಕು ಎಂದು ಚನ್ನರಾಜ ಹಟ್ಟಿಹೊಳಿ ಹೇಳಿದರು.

ಈ ವೇಳೆ ಬೈಲಹೊಂಗಲ ಕ್ಷೇತ್ರದ ಶಾಸಕರಾದ ಮಹಾಂತೇಶ ಕೌಜಲಗಿ, ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂಗಪ್ಪ ಬ ಭದ್ರಶೆಟ್ಟಿ, ಉಪಾಧ್ಯಕ್ಷರಾದ ರೇಖಾ ಢವಳಿ, ಸರ್ವ ಸದಸ್ಯರು, ರಾಮನಗೌಡ ಪಾಟೀಲ, ಸಿ.ಕೆ.ಮೆಕ್ಕೆದ್, ಅಶೋಕ್ ಭದ್ರಶೆಟ್ಟಿ, ಈರಣ್ಣ ಅಂಗಡಿ, ಗಜಾನಂದ ಸುತಗಟ್ಟಿ ಮುಂತಾದವರು ಉಪಸ್ಥಿತರಿದ್ದರು.

Related Articles

Back to top button