Karnataka NewsLatest

*ಸಮೀಕ್ಷೆ ನಡೆಸುತ್ತಿದ್ದಾಗಲೇ ಶಿಕ್ಷಕಿಗೆ ಹೃದಯಾಘಾತ*

ಪ್ರಗತಿವಾಹಿನಿ ಸುದ್ದಿ: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗೆ ತೆರಳಿದ್ದ ಶಿಕ್ಷಕಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

Home add -Advt

ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರದಲ್ಲಿ ಈ ಘಟನೆ ನಡೆದಿದೆ. ಯಶೋಧಾ ಹೃದಯಾಘಾತಕ್ಕೊಳಗಾದ ಶಿಕ್ಷಕಿ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಿಕ್ಷಕಿಯನ್ನು ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಆಪರೇಷನ್ ಮಾಡಿ ಶಿಕ್ಷಕಿಗೆ ಸ್ಟಂಟ್ ಅಳವಡಿಸಲಾಗಿದೆ. ಸಮೀಕ್ಷಾ ಕಾರ್ಯದ ಒತ್ತಡದಿಂದ ಹೃದಯಾಘಾತವಾಗಿದೆ ಎನ್ನಲಾಗಿದೆ.

Related Articles

Back to top button