Latest

*ಬೆಂಗಳೂರು–ಹುಬ್ಬಳ್ಳಿ–ಬೆಳಗಾವಿ ನಡುವೆ ‘ವಂದೇ ಭಾರತ್’ ರೈಲು ಸಂಚಾರ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು:‌ ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ನೂತನ ವಂದೇ ಭಾರತ್ ರೈಲು ಬೆಂಗಳೂರು- ಹುಬ್ಬಳ್ಳಿ- ಬೆಳಗಾವಿಗೆ ಶೀಘ್ರದಲ್ಲಿ ಸಂಚಾರ ಆರಂಭಿಸಲಿದೆ.

ಬೆಂಗಳೂರಿನಿಂದ ಹುಬ್ಬಳ್ಳಿಗೆ ಸಂಪರ್ಕ ಕಲ್ಪಿಸುವ ಹೊಸ ವಂದೇ ಭಾರತ್ ರೈಲು ಧಾರವಾಡಕ್ಕೂ ವಿಸ್ತರಣೆಯಾಗಲಿದೆ. ಈಗಾಗಲೇ ಚೆನ್ನೈ- ಬೆಂಗಳೂರು- ಮೈಸೂರು ನಡುವೆ ಕರ್ನಾಟಕದ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದರು. ಶೀಘ್ರವೇ ಬೆಂಗಳೂರು- ಹುಬ್ಬಳ್ಳಿ- ಬೆಳಗಾವಿಗೆ ಕರ್ನಾಟಕದ 2 ನೇ ವಂದೇ ಭಾರತ್ ರೈಲು ಸಂಚಾರ ಆರಂಭಿಸಲು ರೈಲ್ವೆ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ ಎಂದು ತಿಳಿದುಬಂದಿದೆ.

ಈ ಕುರಿತು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಸಂಜೀವ ಕಿಶೋರ ಮಾಹಿತಿ ನೀಡಿದ್ದು, ಬೆಂಗಳೂರು ಧಾರವಾಡ ನಡುವಿನ ವಂದೇ ಭಾರತ್ ರೈಲು ಬೆಳಗಾವಿಯವರೆಗೂ ವಿಸ್ತರಣೆಗೊಳ್ಳುವ ಸಾದ್ಯತೆ ಇದೆ ಎಂದು ತಿಳಿಸಿದ್ದಾರೆ.

*HDK ಆರೋಪಕ್ಕೆ ಗೃಹ ಸಚಿವ ಅರಗ ಜ್ಞಾನೇಂದ್ರ ತಿರುಗೇಟು*

https://pragati.taskdun.com/santro-ravi-casehome-minister-araga-jnanendrah-d-kumaraswamyreaction/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button