Belagavi NewsBelgaum NewsKannada NewsKarnataka NewsLatest
*ವಂಟಮೂರಿ ಪ್ರಕರಣ; ಸಿಐಡಿಗೆ ಹಸ್ತಾಂತರ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ನಡೆದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿದೆ.
ಕೆಲ ದಿನಗಳ ಹಿಂದೆ ವಂಟಮೂರಿಯಲ್ಲಿ ಮಹಿಳೆಯೊಬ್ಬರನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ನಡೆಸಲಾಗಿತ್ತು. ಸಂತ್ರಸ್ತ ಮಹಿಳೆಯನ್ನು ಭಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಕರಣದ 12 ಆರೋಪಿಗಳಲ್ಲಿ 11 ಆರೋಪಿಗಳನ್ನು ಬಂಧಿಸಲಾಗಿದ್ದು, ಇನ್ನೋರ್ವ ತಲೆಮರೆಸಿಕೊಂಡಿದ್ದಾನೆ.
ಈ ಮಧ್ಯೆ ರಾಜ್ಯ ಸರ್ಕಾರ ವಂಟಮೂರಿ ಪ್ರಕರಣದ ತನಿಖೆಯನ್ನು ಸಿಐಡಿಗೆ ಹಸ್ತಾಂತರಿಸಿದೆ.




