Kannada NewsKarnataka NewsLatest

*ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ; ಘಟನೆ ತಡೆಯಲು ಯತ್ನಿಸಿದ್ದ ಸ್ಥಳೀಯರಿಗೆ ಸನ್ಮಾನ*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆಯನ್ನು ತಡೆಯಲು ಯತ್ನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಮೂವರಿಗೆ ಸನ್ಮಾನ ಮಾಡಲಾಗಿದೆ.

ಮಹಿಳೆಯನ್ನು ವಿವಸ್ತ್ರಗೊಳೀಸಿ ವಿದ್ಯುತ್ ಕಂಬಕ್ಕೆ ಕಟ್ಟಿಹಾಕಿ ಹಲ್ಲೆ ಪ್ರಕರಣವನ್ನು ತಕ್ಷಣ ತಡೆಯಲು ಸ್ಥಳೀಯ ನಿವಾಸಿಗಳು ಯತ್ನಿಸಿದ್ದರು. ಅಲ್ಲದೇ ಘಟನೆ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅಮಾನುಷ ಘಟನೆ ತಡೆಯಲು ಯತ್ನಿಸಿದ್ದ ಮೂವರಿಗೆ ಕೋರ್ಟ್ ಪ್ರಶಂಸನೀಯ ಪತ್ರ ನೀಡಿತ್ತು.

ಈ ಹಿನ್ನೆಲೆಯಲ್ಲಿ ಬೆಳಗಾವಿ ಪೊಲೀಸರು, ಘಟನೆ ತಡೆಯಲು ಯತ್ನಿಸಿದ ವಂಟಮೂರಿ ಗ್ರಾಮದ ನಿವಾಸಿಗಳಾದ ಜಹಂಗೀರ್ ತಹಶೀಲ್ದಾರ್, ವಾಸಿಂ ಮಕಾನದಾರ್, ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿದ್ದಪ್ಪ ಹೊಳಿಕಾರ್ ಅವರನ್ನು ಸನ್ಮಾನಿಸಿ ಪ್ರಶಂಸನೀಯ ಪತ್ರ ನೀಡಿ ಗೌರವರಿಸಿದರು.

ಇದೇ ವೇಳೆ ಮೂವರಿಗೂ ತಲಾ 5 ಸಾವಿರ ರೂಪಾಯಿ ನಗದು ಬಹುಮಾನ ನೀಡಲಾಯಿತು. ಇನ್ನು ತಕ್ಷಣ ಘಟನಾ ಸ್ಥಳಕ್ಕೆ ಧಾವಿಸಿದ್ದ ಕಾಕತಿ ಠಾಣೆಯ ಪೊಲೀಸರನ್ನೂ ಸನ್ಮಾನಿಸಲಾಯಿತು.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button