Uncategorized

*ವರದಾ ನದಿಯಲ್ಲಿ ತೇಲಿ ಬಂದ ವ್ಯಕ್ತಿಯ ಶವ; ಗ್ರಾಮಸ್ಥರು ಕಂಗಾಲು*

ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ಕರಾವಳಿ, ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ವರುನಾರ್ಭಟಕ್ಕೆ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಈ ನಡುವೆ ವರದಾ ನದಿಯಲ್ಲಿ ವ್ಯಕ್ತಿಯ ಶವವೊಂದು ತೇಲಿ ಬಂದಿರುವ ಘಟನೆ ನಡೆದಿದೆ.

ಎರಡು ದಿನಗಳ ಹಿಂದೆ ಹರಿಹರದಲ್ಲಿ ತುಂಗಭದ್ರಾ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲಿ ಬಂದಿತ್ತು. ಈ ಘಟನೆ ಬೆನ್ನಲ್ಲೇ ಇದೀಗ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಲಕ್ಕವಳ್ಳಿ ಬಳಿ ವರದಾ ನದಿಯಲ್ಲಿ ಶವವೊಂದು ತೇಲಿ ಬಂದಿದೆ.

ನದಿಯಲ್ಲಿ ವ್ಯಕ್ತಿಯ ಶವ ತೇಲಿ ಬರುತ್ತಿರುವುದನ್ನು ಕಂಡ ಗ್ರಾಮಸ್ಥರು ಆತಂಕಗೊಂಡಿದ್ದಾರೆ. ರಾಜ್ಯಾದ್ಯಂತ ವರುಣಾರ್ಭಟಕ್ಕೆ ಜನಜೀವನ ತತ್ತರಗೊಂಡಿದ್ದು, ಹಲವೆಡೆ ಭೂಕುಸಿತ, ಮನೆ ಕುಸಿತದಂತಹ ಅವಘಡಗಳು ಘಟಿಸಿದ್ದು, ಸಾವು-ನೋವುಗಳು ಸಂಭವಿಸುತ್ತಿವೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button