LatestUncategorized

*ಈಜಲು ನಾಲೆಗೆ ಇಳಿದಿದ್ದ ಐವರು ನೀರುಪಾಲು*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈಜಲು ವಿಸಿ ನಾಲೆಯಲ್ಲಿ ಇಳಿದಿದ್ದ ಐವರು ನೀರುಪಾಲಾಗಿರುವ ಘಟನೆ ಮಂಡ್ಯ ಜಿಲ್ಲೆಯ ದೊಡ್ಡಕೊತ್ತಗೆರೆ ಗ್ರಾಮದ ಬಳಿ ನಡೆದಿದೆ.

ಮೆಹತಾ (10), ಅನಿಷಾ ಬೇಗಂ (34), ತಸ್ಮಿಯಾ (22), ಅಶ್ರಕ್ (28), ಅತೀಕ್ (22) ಮೃತರು. ಮೂವರ ಮೃತದೇಹವನ್ನು ಅಗ್ನಿಶಾಮಕ ಸಿಬ್ಬಂದಿಗಳು ಹೊರತೆಗೆದಿದ್ದು, ಇನ್ನಿಬ್ಬರಿಗಾಗಿ ಶೋಧ ಕಾರ್ಯ ಮುಂದುವರೆದಿದೆ.

ಮೃತ ಐವರು ಬೆಂಗಳೂರಿನ ನೀಲಸಂದ್ರದವರಾಗಿದ್ದು, ಅಜ್ಜಿಯ ಮನೆಗೆಂದು ಆಗಮಿಸಿದ್ದ ವೇಳೆ ಈ ದುರಂತ ಸಂಭವಿಸಿದೆ.

Home add -Advt
https://pragati.taskdun.com/v-somannasurgicalstrikevarunachamarajanagara/


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button