Kannada NewsKarnataka NewsLatestPolitics

*ವೇಣೂರಿನಲ್ಲಿ ಪಟಾಕಿ ಗೋದಾಮು ಸ್ಫೋಟ: ಎಸ್ಕೇಪ್ ಆಗುತ್ತಿದ್ದ ಆರೋಪಿ ಬಂಧನ*

ಪ್ರಗತಿವಾಹಿನಿ ಸುದ್ದಿ: ಮಂಗಳೂರಿನ ವೇಣೂರು ಬಳಿಯ ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಸೈಯದ್ದ್ ಬಶೀರ್ ಬಂಧಿತ ಆರೋಪಿ. ವೇಣೂರಿನಿಂದ ಪರಾರಿಯಾಗುತ್ತಿದ್ದ ಆರೋಪಿಯನ್ನು ಸುಳ್ಯ ಬಳಿ ಪೊಲೀಸರು ಬಂಧಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಬಳಿ ಜ.28ರಂದು ಪಟಾಕಿ ತಯಾರಿಕಾ ಘಟಕದಲ್ಲಿ ಸ್ಫೋಟ ಸಂಭವಿಸಿತ್ತು. ಘಟನೆಯಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದರು. ಕಾರ್ಮಿಕರ ದೇಹ ಸಂಪೂರ್ಣ ಛಿದ್ರ ಛಿದ್ರವಾಗಿ ಬಿದ್ದಿದ್ದು, ಗ್ 6 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಥಳದಲ್ಲಿ ಪತ್ತೆಯಾಗಿರುವ ವಸ್ತುಗಳು ಹಲವು ಅನುಮಾನಕ್ಕೆ ಕಾರಣವಾಗಿವೆ. ಈ ಸ್ಥಳದಲ್ಲಿ ಗ್ರೆನೇಡ್ ಮಾದರಿಯ ಸ್ಫೋಟಕಗಳನ್ನು ತಯಾರಿಸಲಾಗುತ್ತಿತ್ತು ಎಂಬ ಸಂಶಯ ವ್ಯಕ್ತವಾಗಿದೆ. ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ.

Home add -Advt

Related Articles

Back to top button