
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಹಿರಿಯ ಪತ್ರಕರ್ತ, ಕನ್ನಡ ಹೋರಾಟಗಾರ ರಾಘವೇಂದ್ರ ಜೋಶಿ ನಿಧನರಾಗಿದ್ದಾರೆ. ಅವರಿಗೆ 78 ವರ್ಷ ವಯಸ್ಸಾಗಿತ್ತು.
ಬೆಳಗ್ಗೆ ವಾಕಿಂಗ್ ಮುಗಿಸಿ ಬಂದವರೇ ಕುಸಿದು ಬಿದ್ದು ಹೃದಯಾಘಾತದಿಂದ ನಿಧನರಾದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿ ಇದ್ದಾರೆ. ಸಂಜೆ 5 ಗಂಟೆಗೆ ಹಿಂದವಾಡಿಯ ರುದ್ರಭೂಮಿಯಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.
ಮಹಾರಾಷ್ಟರ್ ಏಕೀಕರಣ ಸಮಿತಿಯ ಕಿರಿಕ್ ವಿರುದ್ಧ ನಿರಂತರ ಹೋರಾಟ ಮಾಡುತ್ತ ಬಂದಿದ್ದ ಅವರು, ನಾಡೋಜ ಎನ್ನುವ ದಿನ ಪತ್ರಿಕೆ ಆರಂಭಿಸಿದ್ದರು. ಸಧ್ಯ ನಿರ್ಭೀತ ಎನ್ನುವ ವಾರಪತ್ರಿಕೆ ನಡೆಸುತ್ತಿದ್ದರು.