*ಕನ್ನಡದ ಹಿರಿಯ ಸಾಹಿತಿ ಪಂಚಾಕ್ಷರಿ ಹಿರೇಮಠ ನಿಧನ*

ಪ್ರಗತಿವಾಹಿನಿ ಸುದ್ದಿ : ಕನ್ನಡದ ಹಿರಿಯ ಸಾಹಿತಿ, ಹೈದರಾಬಾದ್ ಕರ್ನಾಟಕ ವಿಮೋಚನಾ ಚಳವಳಿ ಹೋರಾಟಗಾರ ಡಾ. ಪಂಚಾಕ್ಷರಿ ಹಿರೇಮಠರವರು ನಿಧನರಾಗಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ನಿವೃತ್ತ ಪ್ರಾದ್ಯಾಪಕರಾಗಿದ್ದ ಡಾ. ಪಂಚಾಕ್ಷರಿ ಹಿರೇಮಠರವರಿಗೆ 92 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಹಿರೇಮಠರವರು ಶುಕ್ರವಾರ ನಿಧನ ಹೊಂದಿದ್ದು ಅವರಿಗೆ ಪತ್ನಿ ಇಬ್ಬರು ಪುತ್ರರು, ಓರ್ವ ಪುತ್ರಿ ಇದ್ದಾರೆ. ಹಿರೇಮಠರವರ ಅಂತ್ಯಕ್ರಿಯೆ ಮಾರ್ಚ್ 15 ರ ಇಂದು ಸಂಜೆ 4 ಗಂಟೆಗೆ ಕೊಪ್ಪಳ ಜಿಲ್ಲೆ ಬಿಸರಳ್ಳಿ ಗ್ರಾಮದಲ್ಲಿ ಜರುಗಲಿದೆ … Continue reading *ಕನ್ನಡದ ಹಿರಿಯ ಸಾಹಿತಿ ಪಂಚಾಕ್ಷರಿ ಹಿರೇಮಠ ನಿಧನ*