Belagavi NewsBelgaum NewsKannada NewsKarnataka NewsPolitics
*ನಾಳೆ ರಾಜ್ಯಕ್ಕೆ ಪತ್ನಿ ಜೊತೆ ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ*

ಪ್ರಗತಿವಾಹಿನಿ ಸುದ್ದಿ: ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಮತ್ತು ಅವರ ಪತ್ನಿ ಸುದೇಶ್ ಧನಕರ್ ಅವರು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ನಾಳೆ ಬೆಳಗಾವಿ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ.
ಬೆಳಗಾವಿಯಲ್ಲಿ ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್-ನ್ಯಾಷನಲ್ ಇನ್ಸಿಟ್ಯೂಟ್ ಚ್ ಟ್ರಡಿಷನಲ್ ಮೆಡಿಸಿನ್ (ಎನ್ಐಟಿಎಂ) ಸಂಸ್ಥಾಪನಾ ದಿನ ಮತ್ತು ಕೆಎಲ್ಇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬಳಿಕ ಬೆಂಗಳೂರಿನ ಸಿಎಸ್ ಐಆರ್ – ಎನ್ ಎಎಲ್ ಬೆಂಗಳೂರು ಕ್ಯಾಂಪಸ್ಗೆ ಭೇಟಿ ನೀಡಲಿದ್ದು, ಲಘು ಯುದ್ಧ ವಿಮಾನ (ಎಲ್ಸಿಎ) ಘಟಕಗಳು ಮತ್ತು ಸಾರಸ್ ಪ್ರದರ್ಶನವನ್ನು ವೀಕ್ಷಿಸಲಿದ್ದಾರೆ. ರಾಷ್ಟ್ರೀಯ ಏರೋಸ್ಪೇಸ್ ಲ್ಯಾಬೋರೇಟರೀಸ್ (ಎನ್ಎಎಲ್) ವಿನ್ಯಾಸಗೊಳಿಸಿದ ಲಘು ಸಾರಿಗೆ ವಿಮಾನ ವಿಭಾಗದಲ್ಲಿ ಸಾರಸ್ ಮೊದಲ ಭಾರತೀಯ ಬಹುಪಯೋಗಿ ನಾಗರಿಕ ವಿಮಾನವಾಗಿದೆ.