Election NewsKannada NewsKarnataka NewsPolitics

ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಸಿದ ಕಾಂಗ್ರೆಸ್ ನ 8 ಅಭ್ಯರ್ಥಿಗಳು

ಪ್ರಗತಿವಾಹಿನಿ ಸುದ್ದಿ: ವಿಧಾನಸಭೆಯಿಂದ ಆಯ್ಕೆ ಆಗುವ ವಿಧಾನ ಪರಿಷತ್ ಸದಸ್ಯರ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ 8 ಜನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.‌

ಸೋಮವಾರ ಮಧ್ಯಾಹ್ನ  ವಿಧಾನಸೌಧದಲ್ಲಿ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ‌ ಡಿಕೆ ಶಿವಕುಮಾರ ಅವರ ನೇತೃತ್ವದಲ್ಲಿ 8 ಜನ ಅಭ್ಯರ್ಥಿಗಳನ್ನೊಳಗೊಂಡ ಕಾಂಗ್ರೆಸ್ ತಂಡ ತಮ್ಮ‌ ನಾಮ ಪತ್ರ ಸಲ್ಲಿಕೆಯನ್ನು ವಿಧಾನಸೌಧದ ಎರಡನೇ ಮಹಡಿಯಲ್ಲಿ ಸಲ್ಲಿಸಲಾಯಿತು. 

ಇನ್ನು ಈ ವೇಳೆ ಅಭ್ಯರ್ಥಿಗಳಾದ, ಬೋಸುರಾಜು, ವಸಂತ್ ಕುಮಾರ್, ಯತೀಂದ್ರ ಸಿದ್ದರಾಮಯ್ಯ, ಗೋವಿಂದ್ ರಾಜ್, ಐವನ್ ಡಿಸೋಜ, ಬಿಲ್ಕಿಸ್ ಬಾನು, ಜಗದೇವ್ ಗುಟ್ಟೇದಾರ್, ಬಸನಗೌಡ ಭಾಗಿಯಾಗಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button