Kannada NewsKarnataka NewsLatest

ಬಿಜೆಪಿಗೆ ಧಮ್ ಇಲ್ಲ; ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎಂದ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪರಿಷತ್ ಫಲಿತಾಂಶದಿಂದಾಗಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂಬುದು ಗೊತ್ತಾಗುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 12 ಸ್ಥಾನ ಗೆಲ್ಲಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಚಿಕ್ಕಮಗಳೂರಿನಲ್ಲಿ ನಮ್ಮ ಅಭ್ಯರ್ಥಿ 6 ಮತಗಳ ಅಂತರದಿಂದ ಸೋತರು. ಅಲ್ಲಿ ಹತ್ತು ಮಂದಿ ನಾಮಿನೇಟೆಡ್ ಮೆಂಬರ್ ಇದ್ದರು. ವೋಟ್ ಹಾಕಿಲ್ಲ. ಉಳಿದೆಡೆ ನಾವು ಉತ್ತಮ ಹೋರಾಟ ಮಾಡಿದ್ದೇವೆ. ಜನಪ್ರತಿನಿಧಿಗಳ ತೀರ್ಪು ನಮ್ಮ ಪರ ಇದೆ. ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಇದೆ ಎಂಬುದು ಸಾಬೀತಾಗಿದೆ ಎಂದರು.

ಬೆಳಗಾವಿ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಿಜೆಪಿ ಸೋಲನುಭವಿಸಿದೆ. ಇದು ಬಿಜೆಪಿಗೆ ಧಮ್ಮಿಲ್ಲ ಎಂಬುದನ್ನು ಸೂಚಿಸುತ್ತೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಗೆದ್ದ ಎಲ್ಲಾ ಅಭ್ಯರ್ಥಿಗಳಿಗೂ ಅಭಿನಂದನೆಗಳು ಎಂದು ಹೇಳಿದರು.
ಅಂತಿಮವಾಗಿ ಲಖನ್ ಗೆಲುವು

Home add -Advt

Related Articles

Back to top button