Election NewsKarnataka NewsLatest
*ವಿಧಾನ ಪರಿಷತ್ ಉಪಚುನಾವಣೆಗೆ ಮುಹೂರ್ತ ಫಿಕ್ಸ್*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಉಪಚುನಾವಣೆಗೆ ಮುಹೂರ್ತ ನಿಗದಿಯಾಗಿದೆ. ಕೋಟಾ ಶ್ರೀನಿವಾಸ್ ಪೂಜಾರಿ ಅವರಿಂದ ತೆರವಾಗಿರುವ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆ ಅಕ್ಟೋಬರ್ 21ರಂದು ನಡೆಯಲಿದೆ.
ಸೆಪ್ಟೆಂಬರ್ 26ರಿಂದ ಅಧಿಸೂಚನೆ ಜಾರಿಯಾಗದ್ದು, ಅಕ್ಟೋಬರ್ 3ರಂದು ನಾಮಪತ್ರ ಸಲ್ಲಿಸಲು ಕೊನೆ ದಿನ. ಅಕ್ಟೋಬರ್ 4ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅಕ್ಟೋಬರ್ 7 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.
ಅಕ್ಟೋಬರ್ 21ರಂದು ಬೆಳಿಗ್ಗೆ 8ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ.ಅಕ್ಟೋಬರ್ 24ರಂದು ಮತ ಎಣಿಕೆ ನಡೆಯಲಿದೆ.



