Karnataka NewsLatestPolitics

*ಕಾಂಗ್ರೆಸ್‌ನ ಐದೂ ಅಭ್ಯರ್ಥಿಗಳ ಗೆಲುವು ಖಚಿತ: ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಐದೂ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಲಿದ್ದಾರೆ ಎಂಬ ವಿಶ್ವಾಸವನ್ನು ಮಾಜಿ ಸಚಿವೆ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ವ್ಯಕ್ತಪಡಿಸಿದರು.

ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿದ ಬಳಿಕ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಮುಖಂಡರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿದ್ದಾರೆ. ಅದರ ಫಲವಾಗಿ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಗಳಿಗೆ ಸ್ಪಷ್ಟ ಗೆಲುವು ದೊರೆಯಲಿದೆ ಎಂದು ಅವರು ಹೇಳಿದರು.

ಈ ವೇಳೆ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜೆಡಿಎಸ್‌ನವರು ಕಾಂಗ್ರೆಸ್ ಪಕ್ಷದ ಹತ್ತಿರಕ್ಕೂ ಬರಲು ಸಾಧ್ಯವಿಲ್ಲ. ನಮ್ಮ ಅಭ್ಯರ್ಥಿಗಳ ಗೆಲುವು ನಿಶ್ಚಿತವಾಗಿದೆ ಎಂದು ತಿಳಿಸಿದರು.

Home add -Advt

ರಾಜ್ಯದಲ್ಲಿ ಕಾಂಗ್ರೆಸ್‌ನ ಐವರು ಅಭ್ಯರ್ಥಿಗಳು ಜಯಗಳಿಸಲಿದ್ದು, ಅದರ ಅಂಗವಾಗಿ ಇಂದು ಸಂಜೆ ವಿಜಯೋತ್ಸವ ಆಚರಿಸಲಾಗುವುದು ಎಂದು ಅವರು ಹೇಳಿದರು.

Related Articles

Back to top button