Latest

*ಸಿದ್ದರಾಮಯ್ಯ ವಿರುದ್ಧ ಅಖಾಡಕ್ಕಿಳಿಯಲು ಸಜ್ಜಾದ ಬಿ.ವೈ.ವಿಜಯೇಂದ್ರ?; ವರುಣ ನನ್ನ ಪಂಚಪ್ರಾಣ ಎಂದಿದ್ದೇಕೆ?*

ಪ್ರಗತಿವಾಹಿನಿ ಸುದ್ದಿ; ಮೈಸೂರು: ವಿಧಾನಸಭಾ ಚುನಾವಣೇ ಸಮೀಪಿಸುತ್ತಿದ್ದಂತೆ ಮೈಸೂರು ಜಿಲ್ಲೆಯ ವರಣಾ ಕ್ಷೇತ್ರದ ಅಖಾಡ ಈ ಬಾರಿ ರಾಜ್ಯ ರಾಜಕಾರಣದ ಕೇಂದ್ರ ಬಿಂದುವಾಗುವ ಸಾಧ್ಯತೆ ದಟ್ಟವಾಗಿದೆ. ಸುರಕ್ಷಿತ ಕ್ಷೇತ್ರ ಹುಡುಕಾಟದಲ್ಲಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯ ಬಾದಾಮಿ ಬಿಟ್ಟು, ಕೋಲಾರದಲ್ಲಿ ಪ್ರವಾಸ ಕೈಗೊಂಡು ಅಂತಿಮವಾಗಿ ತಮ್ಮ ಹಳೇ ಕ್ಷೇತ್ರ ವರುಣಾದಿಂದ ಸ್ಪರ್ಧಿಸುವ ಬಗ್ಗೆ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.

ಈ ನಿಟ್ಟಿನಲ್ಲಿ ಕಳೆದ ಎರಡು ದಿನಗಳಿಂದ ವರುಣಾದಲ್ಲಿ ಬೀಡು ಬಿಟ್ಟಿರುವ ಸಿದ್ದರಾಮಯ್ಯ ಕ್ಷೇತ್ರಾದ್ಯಂತ ಸಂಚಾರ ಕೈಗೊಂಡಿದ್ದು, ಪುತ್ರ ಯತೀಂದ್ರ ಸಿದ್ದರಾಮಯ್ಯ ಕೂಡ ಸಾಥ್ ನೀಡಿದ್ದಾರೆ. ಸಿದ್ದರಾಮಯ್ಯ ವರುಣಾದತ್ತ ಮುಖ ಮಾಡುತ್ತಿದ್ದಂತೆ ಬಿಜೆಪಿಯಲ್ಲಿ ಚಟುವಟಿಕೆಗಳು ಚುರುಕುಗೊಂಡಿದ್ದು, ಮಾಜಿ ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮೈಸೂರಿಗೆ ಆಗಮಿಸಿದ್ದು, ವರುಣಾದಿಂದ ಸಿದ್ದರಾಮಯ್ಯ ನಿಂತರೆ ಸಿದ್ದರಾಮಯ್ಯ ವಿರುದ್ಧ ಸ್ಪರ್ಧಿಸುವುವ ಬಗ್ಗೆ ಸುಳಿವು ನೀಡಿದ್ದಾರೆ.

ಹೈಕಮಾಂಡ್ ಸೂಚಿಸಿದರೆ ಯಾವುದೇ ಕ್ಷೇತ್ರದಿಂದ ಸ್ಪರ್ಧಿಸಲು ನಾನು ಸಿದ್ಧ. ಹಳೇ ಮೈಸೂರು ಎಂದರೆ ನನಗೆ ಪಂಚಪ್ರಾಣ. ವರುಣ ಕ್ಷೇತ್ರವೇ ನನಗೆ ರಾಜಕೀಯವಾಗಿ ರಾಜ್ಯದಲ್ಲಿ ಗುರುತಿಸುವಂತೆ ಮಾಡಿದ್ದು. ಕೊನೇಯವರೆಗೂ ನಾನು ಇದನ್ನು ಮರೆಯಲ್ಲ ಎಂದು ಹೇಳುವ ಮೂಲಕ ವರುಣಾ ಕ್ಷೇತ್ರದಿಂದ ಅಖಾಡಕ್ಕೆ ಇಳಿಯಲು ಬಿ.ವೈ.ವಿಜಯೇಂದ್ರ ಇಂಗಿತ ವ್ಯಕ್ತಪಡಿಸಿದ್ದಾರೆ.

ಒಂದು ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವರುಣಾದಿಂದ ಸ್ಪರ್ಧಿಸಿದರೆ ಬಿಜೆಪಿಯಿಂದ ಬಿ.ವೈ.ವಿಜಯೇಂದ್ರ ಅಖಾಡಕ್ಕಿಳಿದರೆ ವರುಣಾ ಕ್ಷೇತ್ರ ರಾಜ್ಯ ರಾಜಕೀಯದ ಜಿದ್ದಾಜಿದ್ದಿನ ಕ್ಷೇತ್ರವಾಗಿ ಗಮನ ಸೆಳೆಯುವುದರಲ್ಲಿ ಸಂಶಯವಿಲ್ಲ.

*ಪ್ರವಾಸಕ್ಕೆ ತೆರಳಿದ್ದ ಶಾಲಾ ಬಸ್ ಪಲ್ಟಿ; ಇಬ್ಬರು ವಿದಾರ್ಥಿಗಳು ದುರ್ಮರಣ*

https://pragati.taskdun.com/bus-accidentmaharashtratwo-studetns-death/

 

*ಗುಡುಗು ಸಹಿತ ಭಾರಿ ಮಳೆ; 15 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ*

https://pragati.taskdun.com/karnatakarain5-daysalert/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button