3ನೇ ಸುತ್ತಿನ ಮತ ಎಣಿಕೆಯಲ್ಲಿಯೂ ಡಿ.ಕೆ.ಶಿವಕುಮಾರ್ ಮುನ್ನಡೆ; ಆರ್.ಅಶೋಕ್ ಗೆ ಶಾಕ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಸಭಾ ಚುನಾವಣಾ ಮತ ಎಣಿಕೆ ಕಾರ್ಯ ಚುರುಕುಗೊಂಡಿದ್ದು, ಜಿದ್ದಾ ಜಿದ್ದಿನ ಕಣ ಕನಕಪುರದಲ್ಲಿ ಸಚಿವ ಆರ್.ಅಶೋಕ್ ಗೆ ಹಿನ್ನಡೆಯಾಗಿದೆ.
ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುನ್ನಡೆ ಸಾಧಿಸಿದ್ದು, ಬಿಜೆಪಿ ಅಭ್ಯರ್ಥಿ ಆರ್.ಅಶೋಕ್ ಹಿನ್ನಡೆಯಲ್ಲಿದ್ದಾರೆ. ಮೂರನೇ ಸುತ್ತಿನ ಮತ ಎಣಿಕೆಯಲ್ಲಿ 15098 ಮತಗಳ ಅಂತರದಿಂದ ಡಿ.ಕೆ.ಶಿವಕುಮಾರ್ ಮುನ್ನಡೆಯಲ್ಲಿದ್ದಾರೆ.




