Latest

*ವಿಧಾನಸೌಧದಲ್ಲಿ ಬಿರುಕು; ದಿಢೀರ್ ಪರಿಶೀಲನೆ ನಡೆಸಿದ ಸ್ಪೀಕರ್*

ಪ್ರಗತಿವಾಹಿನಿ ಸುದ್ದಿ: ವಿಧಾನಸೌಧದ ಗೊಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದ್ದು, ಸ್ಪೀಕರ್ ಯು.ಟಿ.ಖಾದರ್ ಖುದ್ದು ಪರಿಶೀಲನೆ ನಡೆಸಿದ್ದಾರೆ.

ವಿಧಾನಸೌಧದ ಪೂರ್ವ ದಿಕ್ಕಿನಲ್ಲಿರುವ ಗೊಮ್ಮಟದಲ್ಲಿ ಬಿರುಕು ಕಾಣಿಸಿಕೊಂಡಿದೆ. ಇದರಿಂದಾಗಿ ಮಳೆ ನೀರು ಸೋರಿಕೆಯಾಗುತ್ತಿದೆ. ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ ಸ್ಪೀಕರ್ ಯು.ಟಿ.ಖಾದರ್, ತಕ್ಷಣ ಸರಿಪಡಿಸಲಾಗುವುದು ಎಂದು ಹೇಳಿದರು.

ಇದು ನಮ್ಮ ವ್ಯಾಪ್ತಿಗೆ ಬರಲ್ಲ. ಆದರೂ ಸಿಎಂ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಇಲಾಖೆ, ಡಿಪಿಆರ್ ಗಮನಕ್ಕೆ ತರುತ್ತೇನೆ. ಗಮನಕ್ಕೆ ತಂದು ಸರಿಪಡಿಸುವ ಕೆಲಸ ಮಾಡಿಸುತ್ತೇನೆ ಎಂದರು.

Home add -Advt

Related Articles

Back to top button