ಪ್ರಗತಿವಾಹಿನಿ ಸುದ್ದಿ, ಬೆಂಗಳೂರು
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಿತ್ ಷಾ ಅವರ ಗುರುವಾರದ ಬೆಂಗಳೂರು ಕಾರ್ಯಕ್ರಮದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.
ಗುರುವಾರ ಮಧ್ಯಾಹ್ನ 3 ಗಂಟೆಗೆ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಆಗಮಿಸುವ ಅವರು ದೇವನಹಳ್ಳಿ ಬಳಿ ಅನಂತ ವಿದ್ಯಾನಿಕೇತನದಲ್ಲಿ ಮಧ್ಯಾಹ್ನ 3.45ಕ್ಕೆ ನಡೆಯುವ ಶಕ್ತಿ ಕೇಂದ್ರ ಪ್ರಮುಖರ ಸಮಾವೇಶದಲ್ಲಿ ಭಾಗವಹಿಸುವರು.
ಸಂಜೆ 5 ಗಂಟೆಗೆ ಯಲಹಂಕದ ರಾಯಲ್ ಆರ್ಕಿಡ್ ಹೋಟೆಲ್ ನಲ್ಲಿ ಎಂಎಲ್ಎ, ಎಂಎಲ್ ಸಿ , ಎಂಪಿಗಳ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಂಜೆ 7.15 ಕ್ಕೆ ಲೋಕಸಭಾ ಪ್ರಭಾರಿಗಳು, ಸಂಚಾಲಕರು, ವಿಸ್ತಾರಕರು , ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಅಧ್ಯಕ್ಷರು, ವಿಭಾಗ ಸಂಘಟನಾ ಕಾರ್ಯದರ್ಶಿಗಳು, ಕ್ಲಸ್ಟರ್ ಗಳ ಉಸ್ತುವಾರಿಗಳ ಸಭೆಯಲ್ಲಿ ಮಾರ್ಗದರ್ಶನ ಮಾಡುವರು.
ರಾತ್ರಿ 9ಗಂಟೆಗೆ ಕೋರ್ ಕಮಿಟಿ ಸಭೆಯಲ್ಲಿ ಭಾಗವಹಿಸಿ ರಾತ್ರಿ ವಾಸ್ತವ್ಯ ಮಾಡಿ ಫೆ.22ರ ಬೆಳಿಗ್ಗೆ ವಾಪಸ್ ತೆರಳುವರು.