Kannada NewsKarnataka NewsLatest

*ಭೂಕಂಪ: ವಿಜಯಪುರದಲ್ಲಿ ಒಂದೇ ದಿನ ನಾಲ್ಕು ಬಾರಿ ಕಂಪಿಸಿದ ಭೂಮಿ*

ಪ್ರಗತಿವಾಹಿನಿ ಸುದ್ದಿ: ವಿಜಯಪುರದಲ್ಲಿ ಮತ್ತೆ ಭೂಕಂಪ ಸಂಭವಿಸಿದೆ. ಒಂದೇ ದಿನದಲ್ಲಿ ನಾಲ್ಕು ಬಾರಿ ಭೂಮಿ ಕಂಪಿಸಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.

Home add -Advt

ಜಿಲ್ಲೆಯ ಸಿಂದಗಿ ಪಟ್ಟಣದ ಸುತ್ತಮುತ್ತ ಭೂಮಿ ಕಂಪಿಸಿದೆ. ನಿನ್ನೆ ಮಧ್ಯಾಹ್ನದಿಂದ ರಾತ್ರಿವರೆಗೆ ನಾಲ್ಕು ಬಾರಿ ಭೂಕಂಪವಾಗಿದೆ. ಜೋರಾದ ಶಬ್ಧಗಳೊಂದಿಗೆ ಭೂಮಿ ಕಂಪಿಸಿದ್ದು, ಆತಂಕಗೊಂಡ ಜನರು ಮನೆಯಿಂದ ಹೊರಗೋಡಿ ಬಂದಿದ್ದಾರೆ.

ಕಳೆದ 7 ದಿನಗಳ ಹಿಂದೆ ಭೂಮಿಯಿಂದ ಭಾರಿ ಪ್ರಮಾಣದ ಶಬ್ಧ ಕೇಳಿಬಂದಿತ್ತು. ಇದೀಗ ಏಕಾಏಕಿ ನಾಲ್ಕು ಬಾರಿ ಭೂಕಂಪವಾಗಿದ್ದು, ಜಿಲ್ಲೆಯ ಜನರು ಭಯಭೀತರಾಗಿದ್ದಾರೆ.

Related Articles

Back to top button