Kannada NewsKarnataka NewsLatest

*ಭೀಕರ ಬೈಕ್ ಅಪಘಾತ: ಶಿಕ್ಷಕ ಸ್ಥಳದಲ್ಲೇ ಸಾವು*

ಪ್ರಗತಿವಾಹಿನಿ ಸುದ್ದಿ: ಬೈಕ್ ಅಪಘಾತದಲ್ಲಿ ಶಾಲೆಗೆ ತೆರಳುತ್ತಿದ್ದ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.

ಜಿಲ್ಲೆಯ ಅಂಬಳನೂರ ಕ್ರಾಸ್ ಬಳಿ ಈ ಅಪಘಾತ ನಡೆದಿದೆ. ವಾಸುದೇವ ಹಂಚಾಟೆ (46) ಮೃತ ಶಿಕ್ಷಕ. ಬೆಳಿಗ್ಗೆ ಬೈಕ್ ನಲ್ಲಿ ಶಾಲೆಗೆ ಹೋಗುತ್ತಿದ್ದ ವೇಳೆ ರಸ್ತೆಯಲ್ಲಿ ನಾಯಿಯೊಂದು ಅಡ್ಡ ಬಂದಿದೆ. ನಾಯಿಯನ್ನು ಬಚಾವ್ ಮಾಡಲು ಹೋಗಿ ಬೈಕ್ ಅಪಘಾತಕ್ಕೀಡಾಗಿದೆ. ಅಪಘಾತದ ರಭಸಕ್ಕೆ ವಾಸುದೇವ್ ಅವರ ತಲೆಯ ಭಾಗಕ್ಕೆ ಗಂಭೀರವಾದ ಪೆಟ್ಟು ಬಿದ್ದಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Home add -Advt

ವಾಸುದೇವ್ ಅವರು ಕಣಕಾಲ ಪ್ರಾಥಮಿಕ ಶಾಲೆಯ ಶಿಕ್ಷಕರಾಗಿದ್ದರು. ಬಸವನಬಾಗೇವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button