CrimeKannada NewsKarnataka NewsLatest

*ಭೂತನಾಳ ಕೆರೆಯಲ್ಲಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರು ಸೇರಿ 6 ಜನರ ಶವ ಪತ್ತೆ*

ಪ್ರಗತಿವಾಹಿನಿ ಸುದ್ದಿ: ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಘಟನೆ ವಿಜಯಪುರದಲ್ಲಿ ನಡೆದಿದೆ. ಇಲ್ಲಿನ ಐಟಿಹಾಸಿಕ ಭೂತನಾಳ ಕೆರೆಯಲ್ಲಿ ೬ ಶವಗಳು ಪತ್ತೆಯಾಗಿವೆ.

ಇಂದು ಮುಂಜಾನೆ ವಾಕಿಂಗ್ ಗೆ ತೆರಳಿದ್ದ ಜನರು ಕೆರೆಯಲ್ಲಿ ತೇಲುತ್ತಿದ್ದ ಶವಗಳನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಮೀಪಕ್ಕೆ ಹೋಗಿ ನೋಡಿದಾಗ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಬಾಲಕರು ಸೇರಿ ಒಟ್ಟು 6 ಜನರ ಮೃತದೇಹ ಕೆರೆಯಲ್ಲಿ ತೇಲುತ್ತಿರುವುದು ಕಂಡುಬಂದಿದೆ.

Home add -Advt

ಮೃತರ ಗುರುತು ಪತ್ತೆಯಾಗಿಲ್ಲ. ಕೆರೆಯಲ್ಲಿ ಆರು ಜನರ ಶವ ಪತ್ತೆಯಾಗಿರುವುದು ಹಲವು ಅನುಮಾನಕ್ಕೆ ಕಾರಣವಾಗಿದೆ. ಘಟನಾಸ್ಥಳಕ್ಕೆ ವಿಜಯಪುರ ಎಸ್ ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Related Articles

Back to top button