Karnataka News

*ವಿಜಯಪುರದಲ್ಲಿ ಭೂಕಂಪ: ಮನೆಯಿಂದ ಹೊರಗೋಡಿಬಂದ ಜನರು*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಒಂದೆಡೆ ಗುಡುಗು ಸಹಿತ ಭಾರಿ ಮಳೆ ಮುಂದುವರೆದಿದೆ. ಇನ್ನೊಂದೆಡೆ ವರುಣಾರ್ಭಟಕ್ಕೆ ರಾಜ್ಯ ರಾಜಧಾನಿ ಬೆಂಗಳೂರಿನ ಬಹುತೇಕ ಪ್ರದೇಶಗಳೇ ಮುಳುಗಡೆಗಾದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮತ್ತೊಂದೆಡೆ ವಿವಿಧ ಜಿಲ್ಲೆಗಳಲ್ಲಿಯೂ ಮಳೆ ಅವಾಂತರಕ್ಕೆ ಜನರು ನಲುಗಿ ಹೋಗಿದ್ದಾರೆ. ಈ ಮಧ್ಯೆ ವಿಜಯಪುರ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ.

ಭೂಕಂಪದ ತೀವ್ರತೆಗೆ ಮನೆಗಳಲ್ಲಿನ ಪಾತ್ರೆಗಳು, ವಸ್ತುಗಳು ನೆಲಕ್ಕೆ ಬಿದ್ದಿದ್ದು, ಭಾರಿ ಶಬ್ಧ ಕೇಳಿ ಜನರು ಪ್ರಾಣ ಭಯದಲ್ಲಿ ಹೊರಗೋಡಿಬಂದಿದ್ದಾರೆ.

Home add -Advt

ತಿಕೋಟಾ ತಾಲೂಕಿನ ಟಕ್ಕಳಕಿ, ಸೋಮದೇವರಹಟ್ಟಿ, ಮಲಕನದೇವರಹಟ್ಟಿ, ಕಳ್ಳಕವಟಗಿ ಸೇರಿದಂತೆ ಹಲವು ಗ್ರಾಮಗಳಲ್ಲಿ ಭೂಕಂಪದ ಅನುಭವವಾಗಿದೆ.

ಮಹಾರಾಷ್ಟ್ರ ಗಡಿ ಭಾಗದ ಮೊರಬಗಿ, ತಿಕ್ಕುಂಡಿ, ಆಸಂಗಿ ಗ್ರಾಮಗಳಲ್ಲಿಯೂ ಭೂಮಿ ಕಂಪಿಸಿದ್ದು, ಜನರು ಆತಂಕಕ್ಕೀಡಾಗಿದ್ದಾರೆ.


Related Articles

Back to top button