Kannada NewsKarnataka NewsLatest
12, 13ರಂದು ಸಿಎಂ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳ ಸಭೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಎಲ್ಲ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ಸೆ. 12 ಹಾಗೂ 13ರಂದು ವಿಧಾನಸೌಧದ ಮೂರನೇ ಮಹಡಿಯಲ್ಲಿರುವ ಸಮ್ಮೇಳನ ಸಭಾಂಗಣದಲ್ಲಿ (ಕೊಠಡಿ ಸಂಖ್ಯೆ 334) ಕರೆಯಲಾಗಿದೆ.
12ರಂದು ಬೆಳಗ್ಗೆ 11 ಗಂಟೆಯಿಂದ ಹಾಗೂ 13ರಂದು ಮಧ್ಯಾಹ್ನ 2.30ರಿಂದ ಸಭೆ ನಡೆಯಲಿದೆ.




