Belagavi NewsBelgaum NewsKarnataka NewsLatestPolitics

ವಿನಯ ನಾವಲಗಟ್ಟಿ ಅವರ ತಾಯಿಯ ನಿಧನಕ್ಕೆ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ ಸಂತಾಪ

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ವಿನಯ ನಾವಲಗಟ್ಟಿ ಅವರ ತಾಯಿಯವರು ನಿಧನರಾದ ಹಿನ್ನೆಲೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ನಾವಲಗಟ್ಟಿ ಅವರ ನಿವಾಸಕ್ಕೆ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


ತಾಯಿಯನ್ನು ಕಳೆದುಕೊಂಡಿರುವ ವಿನಯ ನಾವಲಗಟ್ಟಿ ಹಾಗೂ ಅವರ ಕುಟುಂಬ ಸದಸ್ಯರೊಂದಿಗೆ ಕೆಲಕಾಲ ಮಾತನಾಡಿದ ಇಬ್ಬರೂ ನಾಯಕರು, ದುಃಖದ ಸಂದರ್ಭದಲ್ಲಿ ಕುಟುಂಬದೊಂದಿಗೆ ತಾವು ಇರುವುದಾಗಿ ತಿಳಿಸಿ ಧೈರ್ಯ ತುಂಬಿದರು. ತಾಯಿಯ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕುಟುಂಬಕ್ಕೆ ನೀಡಲಿ ಹಾಗೂ ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥಿಸಿದರು.

Home add -Advt


ಈ ಸಂದರ್ಭದಲ್ಲಿ ಮಾತನಾಡಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ತಾಯಿಯ ಅಗಲಿಕೆ ಪ್ರತಿಯೊಬ್ಬರ ಜೀವನದಲ್ಲೂ ತುಂಬಲಾರದ ನಷ್ಟ. ಇಂತಹ ದುಃಖದ ಸಂದರ್ಭದಲ್ಲಿ ಕುಟುಂಬದ ನೋವಿನಲ್ಲಿ ನಾವೂ ಭಾಗಿಯಾಗಿದ್ದೇವೆ. ದೇವರು ಕುಟುಂಬಸ್ಥರಿಗೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ ಎಂದು ಸಂತಾಪ ಸೂಚಿಸಿದರು.
ಚನ್ನರಾಜ ಹಟ್ಟಿಹೊಳಿ ಅವರು ಸಹ ಕುಟುಂಬಸ್ಥರಿಗೆ ಧೈರ್ಯ ಹೇಳಿ, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸಿದರು.


ಈ ಸಂದರ್ಭದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Related Articles

Back to top button