
ಪ್ರಗತಿವಾಹಿನಿ ಸುದ್ದಿ, ಅಥಣಿ – ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರ, ಕೃಷ್ಣ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಪರಪ್ಪ ಸವದಿ ಅವರ ಪುತ್ರ ವಿನೋದ ಸವದಿ ಕೊರೋನಾದಿಂದಾಗಿ ಮೃತರಾಗಿದ್ದಾರೆ.
ಅವರಿಗೆ 36 ವರ್ಷ ವಯಸ್ಸಾಗಿತ್ತು.

ಕಳೆದ ಬಾರಿ ಲಾಕ್ ಡೌನ್ ಸಂದರ್ಭದಲ್ಲಿ ವಿನೋದ್ ಅವರು ಬಡವರಿಗೆ ಮತ್ತು ನಿರ್ಗತಿಕರಿಗೆ ಆಹಾರ ಪದಾರ್ಥಗಳನ್ನು ಉಚಿತವಾಗಿ ಹಂಚಿಕೆ ಮಾಡುವುದರಲ್ಲಿ ಮತ್ತು ಇತರ ಸಾಮಾಜಿಕ ಕೆಲಸಗಳಲ್ಲಿಯೂ ಅವಿರತವಾಗಿ ಕೆಲಸ ಮಾಡಿದ್ದರು.