Latest
ರಾಜಭವನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜಭವನಕ್ಕೆ ಭೇಟಿ ನೀಡಿ ರಾಜ್ಯಪಾಲರ ಜೊತೆ ಮಾತಕತೆ ನಡೆಸಿದ್ದಾರೆ.
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಸುದ್ದಿ ಬರುತ್ತಿದ್ದಂತೆ ವಿಶ್ವೇಶ್ವರ ಹೆಗಡೆ ರಾಜಭವನಕ್ಕೆ ಭೇಟಿ ನೀಡಿರುವುದು ಕುತೂಹಲ ಮೂಡಿಸಿದೆ.
11 ಗಂಟೆ ಹೊತ್ತಿಗೆ ಕಾಗೇರಿ ರಾಜಭವನಕ್ಕೆ ತೆರಳಿ ರಾಜ್ಯಪಾಲ ಗೆಹ್ಲೋಟ್ ಜೊತೆ ಚರ್ಚಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಹೆಸರೂ ಕೇಳಿ ಬಂದಿರುವುದು ಇಲ್ಲಿ ಕುತೂಹಲ ಮೂಡಿಸಿದೆ.
ಬಿಜೆಪಿ ಸರಕಾರದ 2 ವರ್ಷದ ಸಾಧನಾ ಸಮಾವೇಶದ ನೇರ ಪ್ರಸಾರ




