Latest

ವೋಟರ್ ಐಡಿ ಅಕ್ರಮ; ಪಾಲಿಕೆಯ ನಾಲ್ವರು ಅಧಿಕಾರಿಗಳು ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮತದಾರರ ಪಟ್ಟಿ ಪರೀಷ್ಕರಣೆ ಹೆಸರಲ್ಲಿ ನಡೆದ ಅಕ್ರಮದಲ್ಲಿ ಸ್ವತ; ಬಿಬಿಎಂಪಿ ಅಧಿಕಾರಿಗಳೇ ಶಾಮೀಲಾಗಿರುವುದು ಬಟಾ ಬಯಲಾಗಿದೆ.

ವೋಟರ್ ಐಡಿ ಅಕ್ರಮ ಪ್ರಕರಣ ಸಂಬಂಧ ತನಿಖಾ ವರದಿ ಬಿಬಿಎಂಪಿ ಕೈ ಸೇರಿದ್ದು, ಅಕ್ರಮದಲ್ಲಿ ಬಿಬಿಎಂಪಿಯ ಆರ್ ಓ ಗಳೇ ಶಾಮೀಲಾಗಿರುವುದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ನಾಲ್ವರು ಆರ್ ಓಗಳನ್ನು ಅಮಾನತುಗೊಳಿಸಲಾಗಿದೆ.

Related Articles

ತನಿಖಾ ವರದಿಯಲ್ಲಿ ಪಾಲಿಕೆ ಅಧಿಕಾರಿಗಳು ಚಿಲುಮೆ ಸಂಸ್ಥೆಗೆ ಬಿ ಎಲ್ ಒ ಎಂದು ಐಡಿ ಕಾರ್ಡ್ ಹಂಚಿಕೆ ಮಾಡಿದ್ದಾರೆ ಎಂಬುದು ಗೊತ್ತಾಗಿದೆ. ಈ ಹಿನ್ನೆಲೆಯಲ್ಲಿ ಮಹಾದೇವಪುರ ವಿಧಾನಸಭಾ ಕ್ಷೇತ್ರದ ಆರ್ ಓ (ರೆವೆನ್ಯೂ ಸಬ್ ಡಿವಿಜನಲ್ ಆಫೀಸರ್) ಚಂದ್ರಶೇಖರ್, ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದ ಆರ್ ಓ ಭೀಮಾಶಂಕರ್, ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಆರ್ ಓ ಸುಹೇಲ್ ಅಹ್ಮದ್ ಅವರನ್ನು ಅಮಾನತ್ತಾಗಿದ್ದಾರೆ ಎಂದು ತಿಳಿದುಬಂದಿದೆ.

ಅಭ್ಯರ್ಥಿ ಘೋಷಣೆ ಮಾಡಲು ಸಿದ್ದರಾಮಯ್ಯಗೂ ಅಧಿಕಾರವಿಲ್ಲ; ಡಿ.ಕೆ.ಶಿವಕುಮಾರ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button